ನಗರದಲ್ಲಿ ಇಂದು ಎಸ್‌.ಎಲ್‌.ಎನ್‌. ಕಾನ್ವೆಂಟ್‌ನ 25ನೇ ವಾರ್ಷಿಕೋತ್ಸವ

ಎಸ್‌.ಎಲ್‌.ಎನ್. ಕಾನ್ವೆಂಟ್‌ನ 25ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಇಂದು ಸಂಜೆ 4.30 ಕ್ಕೆ ಶ್ರೀಮತಿ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಉದ್ಯಮಿ ಕೆ. ಗೋವಿಂದರಾಜ್‌ ಅಧ್ಯಕ್ಷತೆ ವಹಿಸುವರು. ಕಾರ್ಯದರ್ಶಿ ಶ್ರೀಮತಿ ಸುಜಾತ ನಾಗೇಶ್‌ ಉಪಸ್ಥಿತರಿರುವರು. ಮುಖ್ಯ ಅತಿಥಿಗಳಾಗಿ ಡಾ. ಶೃತಿ ರಾಜ್‌, ಶ್ರೀಮತಿ ಐನಳ್ಳಿ ಶುಭ ಆಗಮಿಸುವರು. 

ಈ ಸಂದರ್ಭದಲ್ಲಿ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣೆ ನಡೆಯಲಿದೆ. ನಂತರ ಮಕ್ಕಳಿಂದ ವೇಷಭೂಷಣ ಸ್ಪರ್ಧೆ, ವಿದ್ಯಾರ್ಥಿಗಳಿಂದ ಮತ್ತು ಪೋಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು.

error: Content is protected !!