ನಗರದಲ್ಲಿ ಇಂದು ಕಾರ್ಯಾಗಾರ

ಈಶ್ವರಮ್ಮ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯಲ್ಲಿ ಇಂದು ಬೆಳಿಗ್ಗೆ 9 ರಿಂದ 12 ರವರೆಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗಾಗಿ ಪ್ರೇರಣಾ ಕಾರ್ಯಾಗಾರ ನಡೆಯಲಿದೆ.

ವಿದ್ಯಾರ್ಥಿಗಳು ಅಂಕ ಗಳಿಕೆ ಜೊತೆ ಸಂಸ್ಕಾರ, ಸಂಸ್ಕೃತಿ ಮತ್ತು ವ್ಯಕ್ತಿತ್ವವನ್ನು ಸಹ ಸುಂದರವಾಗಿ ನಿರ್ಮಿಸಿಕೊಂಡು ಭವಿಷ್ಯ ಉಜ್ವಲಗೊಳ್ಳಲಿ ಎಂಬ ಹಿನ್ನೆಲೆಯಲ್ಲಿ ಆಯೋಜಿಸಿರುವ ಈ
ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿ ಗಂಗಾಧರ ಬಿ.ಎಲ್. ನಿಟ್ಟೂರು ಅವರು `ನನ್ನ ಸಾಧನೆ, ನನ್ನ ಕನಸು’ ಕುರಿತು ಉಪನ್ಯಾಸ ನೀಡಲಿದ್ದಾರೆ. 

ಸಂಸ್ಥೆಯ ಪ್ರಾಚಾರ್ಯ ಕೆ.ಎಸ್. ಪ್ರಭುಕುಮಾರ್, ಉಪ ಪ್ರಾಚಾರ್ಯರಾದ ಜಿ.ಎಸ್. ಶಶಿರೇಖಾ ಭಾಗವಹಿಸಲಿದ್ದಾರೆ.

error: Content is protected !!