ಶ್ರೀ ಡಿ. ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಭಾರತ ಹುಣ್ಣಿಮೆ (ಗುರು ಪೂರ್ಣಿಮೆ) ಪ್ರಯುಕ್ತ ಇಂದು ಶ್ರೀ ಸತ್ಯ ನಾರಾಯಣ ಸ್ವಾಮಿ ಪೂಜಾ ಕಥಾ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾ ರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. ಶ್ರೀಮತಿ ನಾಗರತ್ನ, ಶಶಿಧರ್ ಹಾಗೂ ಕುಟುಂಬದವರು ಸೇವಾಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.
ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ
![33 annapurneshwari 05.04.2023 ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ](https://janathavani.com/wp-content/uploads/2023/04/33-annapurneshwari-05.04.2023.jpg)