ನಗರದಲ್ಲಿ ಇಂದು ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕರ್ನಾಟಕ ವಿಜ್ಞಾನ ಪರಿಷತ್ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ, ಎಂ.ಎಂ. ಶಿಕ್ಷಣ ಮಹಾವಿದ್ಯಾಲಯ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಮಧ್ಯಾಹ್ನ 3.30 ಕ್ಕೆ ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಹಿರಿಯ ವಿಜ್ಞಾನಿ ಟಿ.ಎಸ್. ಗೋವಿಂದರಾಜ್ ಕಾರ್ಯಕ್ರಮ ಉದ್ಘಾಟಿಸುವರು. ಪ್ರಾಚಾರ್ಯ ಕೆ.ಟಿ. ನಾಗರಾಜನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರಾವಿಪ ಗೌರವಾಧ್ಯಕ್ಷ ಡಾ.ಜೆ.ಬಿ. ರಾಜ್, ಅಧ್ಯಕ್ಷ ಡಾ.ಬಿ.ಇ. ರಂಗಸ್ವಾಮಿ, ವಿಜ್ಞಾನ ಪರಿವೀಕ್ಷಕಿ ಆರ್.ಬಿ. ವಸಂತಕುಮಾರಿ ಭಾಗವಹಿಸಲಿದ್ದಾರೆ. 

error: Content is protected !!