ಹಾಲಕೆರೆ ಶ್ರೀ ಅನ್ನದಾನೇಶ್ವರ ಸಾರ್ವಜನಿಕ ಸೇವಾ ನ್ಯಾಸ ಟ್ರಸ್ಟ್ ವತಿಯಿಂದ ಇಂದು ಸಂಜೆ 6.30 ಕ್ಕೆ ಅನ್ನದಾನೇಶ್ವರ ಶಾಖಾ ಮಠದಲ್ಲಿ 266 ನೇ ಶಿವಾನುಭವ ಸಂಪದ ನಡಯಲಿದೆ.
ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ದಾವಣಗೆರೆ ವಿವಿ ಪರಿಸರ ಮತ್ತು ವಿಜ್ಞಾನ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಜೆ. ವೀರೇಶ್ ಉಪನ್ಯಾಸ ನೀಡಲಿದ್ದಾರೆ.