ಬಾಪೂಜಿ ಮಕ್ಕಳ ಆಸ್ಪತ್ರೆ `ಎದೆ ಹಾಲಿನ ಭಂಡಾರ’ದ ಉದ್ಘಾಟನಾ ಸಮಾರಂಭ ಮುಂದೂಡಿಕೆ

ದಾವಣಗೆೆರೆ,ಮಾ.1- ನಗರದ ಬಾಪೂಜಿ ಮಕ್ಕಳ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ನಾಳೆ ಶನಿವಾರ  ಮಧ್ಯಾಹ್ನ ಹಮ್ಮಿಕೊಳ್ಳಲಾಗಿದ್ದ  ನವೀಕರಣಗೊಂಡ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಕೇಂದ್ರ,  ನವಜಾತ ಶಿಶುಗಳ ಆರೈಕೆ ಕೇಂದ್ರ ಮತ್ತು  ಎದೆ ಹಾಲಿನ ಭಂಡಾರದ ಉದ್ಘಾಟನಾ ಸಮಾರಂಭವನ್ನು ಅನಿವಾರ್ಯ ಕಾರಣಗಳಿಂದಾಗಿ ಮುಂದಿನ ವಾರಕ್ಕೆ ಮುಂದೂಡಲಾಗಿದೆ ಎಂದು  ಬಾಪೂಜಿ ಮಕ್ಕಳ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಜಿ.ಗುರುಪ್ರಸಾದ್ ತಿಳಿಸಿದ್ದಾರೆ.  

error: Content is protected !!