ಹೆಬ್ಬಾಳ್ ಗ್ರಾಮದಲ್ಲಿ ಇಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಹೆಬ್ಬಾಳ್ ಗ್ರಾಮದಲ್ಲಿ ಇಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ದಾವಣಗೆರೆ, ಮಾ. 4 – ಇಲ್ಲಿಗೆ ಸಮೀಪದ ಹೆಬ್ಬಾಳು ಗ್ರಾಮದ ಶ್ರೀ ರುದ್ರೇಶ್ವರ ವಿರಕ್ತ ಮಠದ ಸಮುದಾಯ ಭವನದಲ್ಲಿ ನಾಳೆ ದಿನಾಂಕ 5ರ ಮಂಗಳವಾರ ನಡೆಯಲಿರುವ ದಾವಣಗೆರೆ ತಾಲ್ಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಕಲ ಸಿದ್ಧತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ, ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ ಅವರುಗಳು ಇಂದು ಸಂಜೆ ಪರಿಶೀಲಿಸಿದರು.

ಕಸಾಪ ಜಿಲ್ಲಾ ಪದಾಧಿಕಾರಿಗಳಾದ ಬಿ. ದಿಳ್ಯಪ್ಪ, ರೇವಣಸಿದ್ದಪ್ಪ ಅಂಗಡಿ,   ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ಶ್ರೀಮತಿ ಹೆಚ್.ಕೆ. ಸತ್ಯಭಾಮ ಮಂಜುನಾಥ್, ತಾಲ್ಲೂಕು ಪದಾಧಿಕಾರಿಗಳಾದ ಎಂ. ಷಡಕ್ಷರಪ್ಪ ಬೇತೂರು, ದಾಗಿನಕಟ್ಟೆ ಪರಮೇಶ್ವರಪ್ಪ, ಆರ್. ಶಿವಕುಮಾರ್, ಎಂ. ಬಸವಂತಪ್ಪ ಬೇತೂರು, ಹರಿಹರದ ಡಿ.ಎಂ. ಮಂಜುನಾಥಯ್ಯ, ರಿಯಾಜ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.

ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಖಾಸಗಿ ಅನುದಾನಿತ, ಅನುದಾನ ರಹಿತ ಹಾಗೂ ಸರ್ಕಾರಿ ಪ್ರಾಥಮಿಕ ಪ್ರೌಢ ಶಾಲೆಗಳ ಶಿಕ್ಷಕರುಗಳಿಗೆ ಅನ್ಯ ಕಾರ್ಯ ನಿಮಿತ್ತ (ಓಓಡಿ) ಸೌಲಭ್ಯ ಕಲ್ಪಿಸಿ ಜಿಲ್ಲಾ ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಆದೇಶಿಸಿದ್ದಾರೆ.

error: Content is protected !!