ದಾವಣಗೆರೆ, ಮಾ. 4 – ಎಲೆಬೇತೂರು ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಹನಿ ಕಾರ್ಯಕ್ರಮ ನಡೆಯಿತು.
ಬೇತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಪನಹಳ್ಳಿ ರೇವಣಸಿದ್ದಪ್ಪ ಮಗು ವಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಆಶಾ ಭಾನುಪ್ರಕಾಶ್ ಮಾತನಾಡಿ, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ದೈಹಿಕ ನೂನ್ಯತೆ ತೊಂದರೆಯನ್ನು ತಪ್ಪಿಸಬೇಕೆಂದು ತಿಳಿಸಿದರು.
ಗ್ರಾಮ ಪಂಚಾಯಿತಿಯ ಉಪಾಧ್ಯ ಕ್ಷರಾದ ಶ್ರೀಮತಿ ಶಾಂತಮ್ಮ ಮಂಜು ನಾಥ್, ಗ್ರಾಮ ಪಂಚಾಯಿತಿ ಸದಸ್ಯ ಎಂ.ಎಸ್. ಮಂಜುನಾಥ್, ಚೇತನ್ ಕುಮಾರ್ ಅಂಚಿನಮನಿ ಗ್ರಾಮದ ಮುಖಂಡ ಮಠದ ಬಸವರಾಜಯ್ಯ, ಎಂಪಿ ಮಂಜುನಾಥ್, ತಾಲ್ಲೂಕು ಕಸಾಪ ನಿರ್ದೇಶಕ ಷಡಕ್ಷರಪ್ಪ ಎಂ.ಬೇತೂರು, ಎ.ಕೆ. ಹನುಮಂತಪ್ಪ, ಬೇತೂರು ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಗುಣಶೀಲ, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಶಬೀನ ಬಾನು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.