ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಾಳೆ ಶಿವರಾತ್ರಿ ಅಮವಾಸ್ಯೆ ಪೂಜೆ

ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ  ನಾಳೆ ಶಿವರಾತ್ರಿ ಅಮವಾಸ್ಯೆ ಪೂಜೆ

ದಾವಣಗೆರೆ, ಮಾ. 8 – ನಗರದ ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಶಿವರಾತ್ರಿ ಅಮವಾಸ್ಯೆ ಪ್ರಯುಕ್ತ  ನಾಡಿದ್ದು ದಿನಾಂಕ 10 ರ ಭಾನುವಾರ ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ್ರೀ  ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. 

ಶ್ರೀಮತಿ ಉಮಾದೇವಿ ಮತ್ತು ಎ.ಡಿ. ಮಂಜಪ್ಪ (ನಿವೃತ್ತ ಕಂದಾಯ ಅಧಿಕಾರಿ, ಮಹಾನಗರ ಪಾಲಿಕೆ, ದಾವಣಗೆರೆ) ಹಾಗೂ ಕುಟುಂಬದವರು ಸೇವಾಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.

error: Content is protected !!