ವನಿತಾ ಸಮಾಜದಿಂದ ವನಿತಾ ಸಮಾಜದ ವಾರ್ಷಿಕೋತ್ಸವ ಸಮಾರಂಭ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಇಂದು ಸಂಜೆ 5 ಗಂಟೆಗೆ ವನಿತಾ ಸಮಾಜದ ಶ್ರೀ ಸತ್ಯ ಸಾಯಿಮಂದಿರದಲ್ಲಿ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹಿರಿಯ ಲೇಖಕಿ ಬಿ.ಟಿ. ಜಾಹ್ನವಿ ಪಾಲ್ಗೊಳ್ಳುವರು. ಅಧ್ಯಕ್ಷತೆಯನ್ನು ಮಾಜಿ ಸಚಿವೆ, ಗೌರವಾಧ್ಯಕ್ಷೆ ಡಾ. ಸಿ. ನಾಗಮ್ಮ ಕೇಶವಮೂರ್ತಿ ವಹಿಸುವರು. ರಾಧಮ್ಮ ಚನ್ನಗಿರಿ ರಂಗಪ್ಪ ವನಿತಾ ಸೇವಾ ಪ್ರಶಸ್ತಿಯನ್ನು ಚನ್ನಗಿರಿ ವಿರೂಪಾಕ್ಷಪ್ಪ ಧರ್ಮಶಾಲಾ ಟ್ರಸ್ಟ್ ನ ಪ್ರಧಾನ ಛೇರ್ಮನ್ ಸಿ.ಆರ್. ವಿರೂಪಾಕ್ಷಪ್ಪ ಅವರು ವನಿತಾ ಸೇವಾ ಪ್ರಶಸ್ತಿಗೆ ಭಾಜನರಾಗಿರುವ ಡಾ. ರಶ್ಮಿ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡುವರು.