ರಾಜ್ಯ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ನಗರದ ಪ್ರವಾಸಿ ಮಂದಿರದಲ್ಲಿ ಇಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1.30ರ ವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್. ಕೌಲಾಪೂರೆ, ಅಧಿಕಾರಿಗಳಾದ ಸಿ. ಮಧುಸೂದನ್, ಪ್ರಭು ಬಿ. ಸೂರಿನ, ಎಚ್.ಎಸ್ ರಾಷ್ಟ್ರಪತಿ ಅಹವಾಲು ಸ್ವೀಕರಿಸುವರು. ಈ ವೇಳೆ ಭ್ರಷ್ಟಾಚಾರ ನಿರೋಧಕ ಕಾಯ್ದೆ ಹಾಗೂ ರಾಜ್ಯ ಲೋಕಾಯುಕ್ತ ಕಾಯ್ದೆ ಬಗ್ಗೆ ಅರಿವು ಮೂಡಿಸುವರು.
July 23, 2024