ಮಲೇಬೆನ್ನೂರು : ಪಾನಿಪುರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕನ ಸಾವು

ಮಲೇಬೆನ್ನೂರು : ಪಾನಿಪುರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕನ ಸಾವು

ಆಸ್ಪತ್ರೆ ಬಿಲ್ ಪೂರ್ಣ ವಿನಾಯಿತಿ ನೀಡುವ ಮೂಲಕ ಮಾನವೀಯತೆ ಮೆರೆದ ಡಾ. ಪ್ರಭಾ ಮಲ್ಲಿಕಾರ್ಜುನ್

ಮಲೇಬೆನ್ನೂರು, ಮಾ.17- ಪಟ್ಟಣದಲ್ಲಿ ಗುರುವಾರ ಪಾನಿಪುರಿ ಸೇವಿಸಿ ವಾಂತಿಭೇದಿಯಿಂದ ಅಸ್ವಸ್ಥರಾಗಿ ದ್ದ 19 ಮಕ್ಕಳ ಪೈಕಿ ಒಂದು ಮಗು ಭಾನುವಾರ ಮೃತಪಟ್ಟಿದೆ.

ಬಾಪೂಜಿ ಮಕ್ಕಳ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿಲಾಲ್ ಎಂಬ ಏಳು ವರ್ಷದ ಬಾಲಕ  ಭಾನುವಾರ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಆಸ್ಪತ್ರೆ ಆವರಣದಲ್ಲಿ ಮೃತ ಬಾಲಕನ ಕುಟುಂಬ ವರ್ಗದವರ ರೋಧನೆ ಮುಗಿಲು ಮುಟ್ಟಿತ್ತು. ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿದ ಕಾಂಗ್ರೆಸ್ ಮುಖಂಡ ನಂದಿಗಾವಿ ಶ್ರೀನಿವಾಸ್ ಹಾಗೂ ತುರ್ಚಘಟ್ಟ ರಿಯಾಜ್, ಮೃತ ಮಗುವಿನ ಆಸ್ಪತ್ರೆ ಬಿಲ್‌ನಲ್ಲಿ ರಿಯಾಯಿತಿ ನೀಡುವಂತೆ ಎಸ್.ಎಸ್. ಕೇರ್ ಟ್ರಸ್ಟ್‌ನ ಲೈಫ್ ಟ್ರಸ್ಟಿ ಡಾ. ಪ್ರಭಾ ಮಲ್ಲಿಕಾ ರ್ಜುನ್ ಅವರನ್ನು ಭೇಟಿ ಮಾಡಿ ವಿನಂತಿಸಿ ಕೊಂಡರು. ಘಟನೆಯ ಬಗ್ಗೆ ಬೇಸರ ವ್ಯಕ್ತ ಪಡಿಸಿದ ಪ್ರಭಾ, ಆಸ್ಪತ್ರೆ ಬಿಲ್‌ನಲ್ಲಿ ಪೂರ್ಣ ರಿಯಾಯಿತಿ ನೀಡುವ ಮೂಲಕ ನೊಂದ ಕುಟುಂಬಕ್ಕೆ ನೆರವಾಗಿದ್ದಾರೆ. 

error: Content is protected !!