ನಗರದಲ್ಲಿ ಇಂದಿನ ಕಾಂಗ್ರೆಸ್ ಸಭೆಗೆ ಕೆಪಿಸಿಸಿ ವಕ್ತಾರ ನಿಖಿಲ್ ರಾಜ್

ನಗರದಲ್ಲಿ ಇಂದಿನ ಕಾಂಗ್ರೆಸ್ ಸಭೆಗೆ  ಕೆಪಿಸಿಸಿ ವಕ್ತಾರ ನಿಖಿಲ್ ರಾಜ್

ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಕಾಂಗ್ರೆಸ್ ಪಕ್ಷದ ಜನ ಪ್ರತಿನಿಧಿಗಳು ಮತ್ತು ಮುಖಂಡರ ಸಭೆಯನ್ನು ಇಂದು ಕರೆಯಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ಬಂಟರ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್‌.ಬಿ. ಮಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಏರ್ಪಾಡಾಗಿರುವ ಈ ಸಭೆಯಲ್ಲಿ ಕೆಪಿಸಿಸಿ ವಕ್ತಾರ ನಿಖಿತ್ ರಾಜ್ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಶಾಸಕರುಗಳಾದ ಶಾಮನೂರು ಶಿವಶಂಕರಪ್ಪ, ಮಾಯಕೊಂಡದ ಕೆ.ಎಸ್. ಬಸವಂತಪ್ಪ, ಜಗಳೂರಿನ ಬಿ. ದೇವೇಂದ್ರಪ್ಪ, ಹರಪನಹಳ್ಳಿಯ ಲತಾ ಮಲ್ಲಿಕಾರ್ಜುನ್, ಚನ್ನಗಿರಿಯ ಶಿವಗಂಗಾ ಬಸವರಾಜ್, ಹೊನ್ನಾಳಿಯ ಡಿ.ಜಿ. ಶಾಂತನಗೌಡ, ಮುಖಂಡರುಗಳಾದ ಚನ್ನಗಿರಿಯ ವಡ್ನಾಳ್ ರಾಜಣ್ಣ, ಹರಿಹರದ ನಂದಿಗಾವಿ ಶ್ರೀನಿವಾಸ್, ಎಸ್. ರಾಮಪ್ಪ, ಅರಸೀಕೆರೆಯ ಕೊಟ್ರೇಶ್, ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.

error: Content is protected !!