ಇಂದಿನಿಂದ ಅನಧಿಕೃತ ಪಂಪ್‌ಸೆಟ್ ತೆರವು ಕಾರ್ಯಾಚರಣೆ

ದಾವಣಗೆರೆ, ಮಾ. 25- 2023-24 ನೇ ಸಾಲಿನ ಬೇಸಿಗೆ ಹಂಗಾಮಿಗೆ ಕಾಲುವೆಯಲ್ಲಿ ನೀರು ಹರಿಸಲಾಗುತ್ತಿದ್ದು, ನೀರೆತ್ತಲು ಕಾಲುವೆಗೆ ಅಳವಡಿಸಲಾದ ಅನಧಿಕೃತ ಪಂಪ್‌ಸೆಟ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಾಳೆ ದಿನಾಂಕ 26ರ ಮಂಗಳವಾರದಿಂದ ಪ್ರಾರಂಭಿಸಲು ಯೋಜಿಸಲಾಗಿದೆ ಎಂದು ತ್ಯಾವಣಗಿ ಭದ್ರಾ ನಾಲೆ ಉಪ ವಿಭಾಗ ನಂ.3, ಕನೀನಿನಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಚನ್ನಗಿರಿ ತಾಲ್ಲೂಕಿನ ವ್ಯಾಪ್ತಿಯಲ್ಲಿ ಬರುವ ದಾವಣಗೆರೆ ಶಾಖಾ ಕಾಲುವೆ 0.00 ಕಿಮೀ ಯಿಂದ 30.00 ಕಿಮೀ ವರೆಗೆ (ಕೆರೆಬಿಳಚಿಯಿಂದ) ಅನಧಿಕೃತ ಪಂಪ್‌ಸೆಟ್‌ ತೆರವುಗೊಳಿಸುವ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ತಕ್ಷಣ ಅನಧಿಕೃತ ಪಂಪ್‌ಸೆಟ್‌ಗಳನ್ನು ತೆರವುಗೊಳಿಸದಿದ್ದರೆ ಕರ್ನಾಟಕ ನೀರಾವರಿ ಕಾಯ್ದೆ 1965 ರ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

error: Content is protected !!