ರುಡ್‍ಸೆಟ್‍ನಿಂದ ಸಿ.ಸಿ.ಟಿವಿ ಅಳವಡಿಕೆ, ದುರಸ್ಥಿ ತರಬೇತಿಗೆ ಅರ್ಜಿ

ದಾವಣಗೆರೆ ಮಾ. 26 –  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ರುಡ್‍ಸೆಟ್‍ನಿಂದ ಸಿಸಿ ಟಿವಿ ಅಳವಡಿಕೆ ಮತ್ತು ದುರಸ್ತಿ ಕುರಿತು 13 ದಿನಗಳ ಉಚಿತ ತರಬೇತಿಯನ್ನು ಏಪ್ರಿಲ್ 15 ರಿಂದ ಆಯೋಜಿಸಲಾಗಿದೆ.

ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವ ಕರು ಅರ್ಜಿ ಸಲ್ಲಿಸಬಹುದಾಗಿದೆ. ತರಬೇ ತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು.  ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತ 18 ರಿಂದ 45 ವರ್ಷ ವಯೋಮಾ ನದವರು ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿ ಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನವಾಗಿದೆ.  ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 97409 82585, 93801 62042, 91138 80324 ಗೆ ಸಂಪರ್ಕಿಸಬಹುದಾಗಿದೆ.

error: Content is protected !!