ನಗರದಲ್ಲಿ ಇಂದು ವಿಶ್ವರಂಗಭೂಮಿ ದಿನಾಚರಣೆ

ಸ್ಫೂರ್ತಿ ಸಾಂಸ್ಕೃತಿಕ ಸೇವಾ ಸಂಘ ಇವರ ಆಶ್ರಯದಲ್ಲಿ ವಿಶ್ವರಂಗಭೂಮಿ ದಿನಾಚರಣೆ ಹಾಗೂ ಉಪನ್ಯಾಸ ಕಾರ್ಯಕ್ರಮವನ್ನು ರೋಟರಿ ಬಾಲಭವನದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ.

ಶರಣ ಸಾಹಿತ್ಯ ಪರಿಷತ್‌ ನಗರ ಘಟಕದ ಗೌರವಾಧ್ಯಕ್ಷ ಎಂ.ಎಸ್. ನಾಗರಾಜಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ, ಸಿ.ಜಿ.ಕೆ. ಪ್ರಶಸ್ತಿ ಪುರಸ್ಕೃತ ಶ್ರೀಮತಿ ಹೆಚ್.ಕೆ. ಸತ್ಯಭಾಮ ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿಶ್ವ ರಂಗಭೂಮಿ ಕುರಿತು ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಐರಣಿ ಬಸವರಾಜ್ ಉಪನ್ಯಾಸ ನೀಡುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಸಾಹಿತಿ, ನಾಟಕ ಲೇಖಕ ಡಾ. ಎ. ಶಿವನಗೌಡ, ಮಾನವ ಮಹಿಳಾ ಹಕ್ಕುಗಳ ಅಧ್ಯಕ್ಷರಾದ ಶ್ರೀಮತಿ ಡಿ.ಎಂ.ಕಲ್ಪನಾರಾಜ್, ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪಿ.ಜಿ. ಪರಮೇಶ್ವರಪ್ಪ (ಬಿಳಿಚೋಡು), ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬಿ.ಇ. ತಿಪ್ಪೇಸ್ವಾಮಿ (ನಾರಶೆಟ್ಟಿಹಳ್ಳಿ) ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

error: Content is protected !!