ನಗರದಲ್ಲಿ ಇಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ನಾಟಕ ಪ್ರದರ್ಶನ

ಪ್ರತಿಮಾ ಸಭಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ  ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನಾಟಕ ಪ್ರದರ್ಶನವನ್ನು ಎವಿಕೆ ಕಾಲೇಜು ಆವರಣದಲ್ಲಿರುವ ಶ್ರೀಮತಿ ಪಾರ್ವತಮ್ಮ ಶಿವಶಂಕರಪ್ಪ ಸಭಾಂಗಣದಲ್ಲಿ ಇಂದು ಬೆಳಿಗ್ಗೆ 11.30 ಗಂಟೆಗೆ ಏರ್ಪಡಿಸಲಾಗಿದೆ. 

ರಂಗ ತಜ್ಞ ಡಾ. ಎಂ.ಜಿ. ಈಶ್ವರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್ಎಸ್ಎಂಬಿ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಅನಿತಾ ಹೆಚ್. ದೊಡ್ಡಗೌಡರ್ ವಿಶೇಷ ಉಪನ್ಯಾಸ ನೀಡಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಉಪಸ್ಥಿತಿಯಲ್ಲಿ  ಎ.ವಿ.ಕೆ. ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕಮಲಾ ಸೊಪ್ಪಿನ ಅಧ್ಯಕ್ಷತೆ ವಹಿಸುವರು.

ಮೈಸೂರಿನ ಶಶಿ ಥಿಯೇಟರ್  ಇವರಿಂದ ಬಿ.ಎನ್. ಶಶಿಕಲಾ ಅವರ ವಿನ್ಯಾಸ ಹಾಗೂ ನಿರ್ದೇಶನದ ಡಾ. ಹೆಚ್.ಎಸ್. ವೆಂಕಟೇಶ ಮೂರ್ತಿ ಅವರ `ಉರಿಯ ಉಯ್ಯಾಲೆ’  ನಾಟಕ ಪ್ರದರ್ಶನಗೊಳ್ಳಲಿದೆ.

error: Content is protected !!