ಸಚಿವ ತಂಗಡಗಿ ಪದಚ್ಯುತಿಗೆ ಬಿಜೆಪಿ ಆಗ್ರಹ

ದಾವಣಗೆರೆ, ಮಾ. 27- ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೆಂಬಲಿಸುವವರ ಕಪಾಳಕ್ಕೆ ಹೊಡೆಯಿರಿ ಎಂದಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಸಚಿವ ಸ್ಥಾನದಿಂದ ಪದಚ್ಯುತಿಗೊಳಿಸುವಂತೆ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ವಕ್ತಾರ ಕೊಳೇನಹಳ್ಳಿ ಬಿ.ಎಂ. ಸತೀಶ್, ಬರುವ ಚುನಾವಣೆಯಲ್ಲಿ ಸೋಲುತ್ತೇವೆಂಬ ಹತಾಷೆಯಿಂದ ಕಾಂಗ್ರೆಸ್ ಮುಖಂಡರು ಇಂತಹ ಹೇಳಿಕೆಗಳನ್ನು ನೀಡಲಾರಂಭಿಸಿದ್ದಾರೆ ಎಂದರು.

ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಬಿ.ಎಸ್.ಶ್ಯಾಮ್ ಮಾತನಾಡಿದರು. ಜಿಲ್ಲಾ ಬಿಜೆಪಿ ಸಹ ವಕ್ತಾರ ಆರ್. ಶಿವಾನಂದ್, ಮೋದಿ ಅವರ ಯೋಜನೆಗಳಿಂದಾಗಿ ಸಾಕಷ್ಟು ಯುವ ಜನರಿಗೆ ಉದ್ಯೋಗ ದೊರೆತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹೆಚ್.ಪಿ.ವಿಶ್ವಾಸ್, ಹೆಚ್.ಎನ್.ಗುರುನಾಥ್, ಅನಿಲ್ ಕುಮಾರ್ ನಾಯ್ಕ ಇದ್ದರು.

error: Content is protected !!