ಯಲವಟ್ಟಿಯಲ್ಲಿ ನಾಳೆ ಲಿಂಗೈಕ್ಯ ಶ್ರೀಗಳ ಪುಣ್ಯಾರಾಧನೆ

ಯಲವಟ್ಟಿಯಲ್ಲಿ ನಾಳೆ ಲಿಂಗೈಕ್ಯ ಶ್ರೀಗಳ ಪುಣ್ಯಾರಾಧನೆ

ಮಲೇಬೆನ್ನೂರು, ಮಾ. 26- ಯಲವಟ್ಟಿ ಗ್ರಾಮದ ಶ್ರೀ ಗುರು ಸಿದ್ಧಾಶ್ರಮದ ವೈರಾಗ್ಯನಿಧಿ ಶ್ರೀ ಶಿವಾನಂದ ಮಹಾಸ್ವಾಮೀಜಿ ಅವರ 19ನೇ ವರ್ಷದ ಪುಣ್ಯರಾಧನೆ ಹಾಗೂ ಜ್ಞಾನನಿಧಿ ಶ್ರೀ ನಿತ್ಯಾನಂದ ಮಹಾಸ್ವಾಮೀಜಿ ಅವರ 17ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮವನ್ನು ನಾಡಿದ್ದು ದಿನಾಂಕ 28ರ ಗುರುವಾರ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಯೋಗಾನಂದ ಸ್ವಾಮೀಜಿ ತಿಳಿಸಿದ್ದಾರೆ.

ಗುರುವಾರ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಗುರು ಕಲಶ ಸ್ಥಾಪನೆ, ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಭಗವದ್ಗೀತಾ ಸಾಮೂಹಿಕ ಪಾರಾಯಣದ ನಂತರ ಬೆಳಿಗ್ಗೆ 9 ಗಂಟೆಗೆ ಮಹಾತ್ಮರಿಂದ ಪ್ರಣವ ಧ್ವಜಾರೋಹಣ ಮಾಡಲಾಗುವುದು.

ಬೆಳಿಗ್ಗೆ 10 ಗಂಟೆಗೆ ನಂಬು ನೀನೆ ನಿತ್ಯ ಬೋಧನೆಯ ನಿಗಮವನ್ನು ಎಂಬ ವಿಷಯ ಕುರಿತು ಮತ್ತು ಸಂಜೆ 6 ಗಂಟೆಯ ಕಾರ್ಯಕ್ರಮದಲ್ಲಿ `ಅನುಪಮಾಚಲ ಭಕ್ತಿ ಭಾವಾನುಕೂಲನೆ ಶಂಭುಲಿಂಗ’ ವಿಷಯ ಕುರಿತು ಪೂಜ್ಯರು ಬೋಧನೆಗೈವರು.

ಚಿತ್ರದುರ್ಗದ ಸದ್ಗುರು ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಮಹಾಸ್ವಾಮೀಜಿ, ದಾವಣಗೆರೆಯ ಜಡೇಸಿದ್ಧ ಶಿವಯೋಗೀಶ್ವರ ಮಠದ ಶ್ರೀ ಶಿವಾನಂದ ಮಹಾಸ್ವಾಮೀಜಿ, ಪುಷ್ಪಗಿರಿ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಮತ್ತು ರಟ್ಟಿಹಳ್ಳಿ ಕಬ್ಬಿಣಕಂಥಿ ಮಠದ ಶ್ರೀ ಮುರುಳೀಧರ ಸ್ವಾಮೀಜಿ, ಹೋತನಹಳ್ಳಿಯ ಶ್ರೀ ಶಂಕರಾನಂದ ಸ್ವಾಮೀಜಿ, ಹುಣಸಿಕಟ್ಟಿ ಸಿದ್ಧಾಶ್ರಮದ ಶ್ರೀ ಕೃಷ್ಣಾನಂದ ಭಾರತ ಸ್ವಾಮೀಜಿ, ಬಸವಾಪಟ್ಟಣದ ಶ್ರೀಕೃಷ್ಣಾನಂದ ಭಾರತಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ.

ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕ ಬಿ.ಪಿ. ಹರೀಶ್, ಮಾಜಿ ಶಾಸಕರಾದ ಎಸ್. ರಾಮಪ್ಪ, ಹೆಚ್.ಎಸ್. ಶಿವಶಂಕರ್, ಮೋಹನ್‌ಕುಮಾರ್ ಕೊಂಡಜ್ಜಿ, ಕೋಗುಂಡಿ ಬಕ್ಕೇಶಪ್ಪ, ಹನಗವಾಡಿ ಕುಮಾರ್, ಕೆಂಚಮ್ಮನಹಳ್ಳಿ ಸುರೇಶ್, ಸಿರಿಗೆರೆ ನಾಗನಗೌಡ್ರು, ಬಿ. ಚಿದಾನಂದಪ್ಪ, ನಂದಿಗಾವಿ ಶ್ರೀನಿವಾಸ್, ಹನಗವಾಡಿ ವೀರೇಶ್, ಬೆಣ್ಣೆಹಳ್ಳಿ ಹಾಲೇಶಪ್ಪ, ಬಿ.ಎಂ. ವಾಗೀಶ್ ಸ್ವಾಮಿ, ಚಂದ್ರಶೇಖರ್ ಪೂಜಾರ್,  ಜಿ.ಬಿ. ವಿನಯಕುಮಾರ್ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಲಿದ್ದಾರೆ.

error: Content is protected !!