ನಗರದಲ್ಲಿ ಇಂದು ಚಿತ್ರಕಲಾ, ಛಾಯಾಚಿತ್ರಗಳ ಪ್ರದರ್ಶನ

ದಾವಣಗೆರೆ, ಮಾ. 27-  ದಾವಣಗೆರೆ ವಿಶ್ವವಿದ್ಯಾನಿಲಯ ಹಾಗೂ ದೃಶ್ಯಕಲಾ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ  ವಿಜಯಪುರದ ಕಲಾವಿದ ರಮೇಶ ಚವ್ಹಾಣ್‌  ಹಾಗೂ ಛಾಯಾಗ್ರಾಹಕ ಸತೀಶ ಕಲಾಲ್ ಇವರ ಚಿತ್ರಕಲಾ ಮತ್ತು ಛಾಯಾಚಿತ್ರಗಳ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಲಾವಿಮರ್ಶಕ ದತ್ತಾತ್ರೇಯ ಎನ್. ಭಟ್ಟ ತಿಳಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೃಶ್ಯಕಲಾ ಮಹಾವಿದ್ಯಾಲಯದ ದೃಶ್ಯವಿಶ್ವ ಕಲಾ ಗ್ಯಾಲರಿಯಲ್ಲಿ ನಾಳೆ ದಿನಾಂಕ 28ರಿಂದ ಮೂರು ದಿನಗಳ ಕಾಲ ನಡೆಯುವ ಈ ಪ್ರದರ್ಶನವನ್ನು ಬೆಳಿಗ್ಗೆ 11 ಗಂಟೆಗೆ ಪತ್ರಕರ್ತ ಬಿ.ಎನ್. ಮಲ್ಲೇಶ್ ಉದ್ಘಾಟಿಸಲಿದ್ದಾರೆ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ.ಜೈರಾಜ ಎಂ. ಚಿಕ್ಕಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.  ಡಾ.ಪ್ರಶಾಂತ ಹೆಗಡೆ, ಡಾ.ಸತೀಶ್ ಕುಮಾರ್ ಪಿ. ವಲ್ಲೇಪುರೆ ಉಪಸ್ಥಿತರಿರಲಿದ್ದಾರೆ. ಪ್ರದರ್ಶನವು ಬೆಳಿಗ್ಗೆ 10.30 ರಿಂದ ಸಂಜೆ 5.30ರವರೆಗೆ ಇರಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹರೀಶ್, ಶಿವಶಂಕರ್ ಸುತಾರ್, ರಂಗನಾಥ ಕುಲಕರ್ಣಿ ಇದ್ದರು.

error: Content is protected !!