ನಗರದಲ್ಲಿ ಇಂದು ನ್ಯಾಯವಾದಿಗಳಿಗೆ ನ್ಯಾಯ ವಿಜ್ಞಾನ ಕಾರ್ಯಕ್ರಮ

ನಗರದಲ್ಲಿ ಇಂದು ನ್ಯಾಯವಾದಿಗಳಿಗೆ ನ್ಯಾಯ ವಿಜ್ಞಾನ ಕಾರ್ಯಕ್ರಮ

ಜಿಲ್ಲಾ ವಕೀಲರ ಸಂಘದಿಂದ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಉಪನ್ಯಾಸ ಮಾಲಿಕೆ-7 ನ್ಯಾಯವಾದಿಗಳಿಗೆ ನ್ಯಾಯ ವಿಜ್ಞಾನ ಕಾರ್ಯಕ್ರಮವನ್ನು ಇಂದು ಮಧ್ಯಾಹ್ನ 2.30ಕ್ಕೆ ಆಯೋಜಿಸಲಾಗಿದೆ.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ಕಾರ್ಯಕ್ರಮ ಉದ್ಘಾಟಿಸುವರು.‌ ಚಿತ್ರದುರ್ಗದ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಡಾ.ನಟರಾಜ್ ಉಪನ್ಯಾಸ ನೀಡುವರು.‌ 

ಮುಖ್ಯ ಅತಿಥಿಗಳಾಗಿ ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀ ಶರಾದ ಎನ್.ಶ್ರೀಪಾದ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶ ರಾದ ಕೆ.ದಶರಥ್, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ‌ ಶಿವಪ್ಪ ಗಂಗಪ್ಪ ಸಲಗರೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮಹಾವೀರ ಮ. ಕರೆಣ್ಣವರ ಆಗಮಿಸುವರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್. ಎಚ್. ಅರುಣ ಕುಮಾ‌ರ್ ಅಧ್ಯಕ್ಷತೆ ವಹಿಸುವರು.

error: Content is protected !!