ಗಂಗನರಸಿಯಲ್ಲಿ ಇಂದು ಯುಗಾದಿ ವಿಶೇಷ ಪೂಜೆ

ಹರಿಹರ ತಾಲ್ಲೂಕಿನ ಗಂಗನರಸಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಹೊರ ಮಠದಲ್ಲಿ ಯುಗಾದಿ ಅಮಾವಾಸ್ಯೆಯ ವಿಶೇಷ ಪೂಜಾ ಕಾರ್ಯಕ್ರಮಗಳು ನಾಳೆ ನಡೆಯಲಿವೆ.

ಬೆಳಿಗ್ಗೆ 11 ಗಂಟೆಗೆ ಶ್ರೀ ಗೋಣಿ ಬಸವೇಶ್ವರ ಹಾಗೂ ನಾಗದೇವತಾ ಸ್ವಾಮಿಗಳಿಗೆ ಅಮಾವಾಸ್ಯೆಯ ವಿಶೇಷ ಪೂಜೆ, ಅಭಿಷೇಕ,  ಮಹಾಮಂಗಳಾರತಿ ನಡೆಯುವುದು. ನಂತರ 11.30 ಕ್ಕೆ ಮಹಾ ಪ್ರಸಾದ ಸೇವೆ ಜರುಗುವುದು.

ಕಕ್ಕರಗೊಳ್ಳದ ಸುಲ್ತಾನಪ್ಪನವರ ಬಸವರಾಜಪ್ಪ ಮತ್ತು ಸಹೋದರರು, ಪ್ರಸಾದದ ವ್ಯವಸ್ಥೆ ಏರ್ಪಡಿಸಿದ್ದಾರೆ. ಶ್ರೀ ಗೋಣಿ ಬಸವೇಶ್ವರ ಸ್ವಾಮಿ ಹೊರಮಠ ಹಾಗೂ ಶ್ರೀ ಹನುಮಂತದೇವರ ಜೀರ್ಣೋದ್ಧಾರ ಸಮಿತಿ ಆಶ್ರಯದಲ್ಲಿ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಧ್ಯಕ್ಷ ಜಿ.ಎಂ. ನಾಗೇಂದ್ರಪ್ಪ, ಕಾರ್ಯದರ್ಶಿ ಗೌಡ್ರ ಚನ್ನಬಸಪ್ಪ ತಿಳಿಸಿದ್ದಾರೆ.

error: Content is protected !!