ಹರಿಹರದಲ್ಲಿ ಇಂದು ಕಾಂಗ್ರೆಸ್‌ ಸಭೆ

ದಾವಣಗೆರೆ ಲೋಕಸಭಾ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಉಮೇದುವಾರಿಕೆ ಸಲ್ಲಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹರಿಹರ ವಿಧಾನಸಭಾ ಕ್ಷೇತ್ರದ ಮುಖಂಡರು, ಎಲ್ಲಾ ಘಟಕಗಳ ಪದಾಧಿಕಾರಿಗಳು, ಬೂತ್ ಮಟ್ಟದ ಅಧ್ಯಕ್ಷರುಗಳು, ನಗರಸಭಾ ಸದಸ್ಯರ ಪೂರ್ವಭಾವಿ ಸಭೆಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ಎಚ್. ಕೆ. ವೀರಪ್ಪ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಎಂ.ಬಿ.ಅಬೀದ್ ಅಲಿ ತಿಳಿಸಿದ್ದಾರೆ. 

error: Content is protected !!