ದಾವಣಗೆರೆ,ಏ.18- ನಾಮಪತ್ರ ಸಲ್ಲಿಕೆಗೆ ಐದನೇ ದಿನವಾದ ಗುರುವಾರ 10 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಕೆಆರ್ಎಸ್ ಪಕ್ಷದಿಂದ ರಾಘವೇಂದ್ರ ಜಿ.ಪಿ ಉಳಿದಂತೆ ಎಲ್ಲಾ ಪಕ್ಷೇತರರಾಗಿದ್ದು, ರವಿನಾಯಕ, ತಸ್ಲಿಮ್ ಭಾನು, ಪರ್ವೇಜ್, ಎಂ.ರಂಗನಾಥಸ್ವಾಮಿ, ರಶೀದ್ ಖಾನ್, ಸಲೀಂ, ಮಂಜುನಾಥ ಎ.ಕೆ, ಅಲ್ಲಾ ಭಕ್ಷಿ.ಬಿ, ಅಬ್ದುಲ್ ನಜೀರ್ ಸಾಬ್ ನಾಮಪತ್ರ ಸಲ್ಲಿಸಿದವರು. ಇದುವರೆಗೆ ಒಟ್ಟು 29 ಅಭ್ಯರ್ಥಿ ಗಳಿಂದ 34 ನಾಮಪತ್ರಗಳು ಸಲ್ಲಿಕೆಯಾಗಿವೆ.
ಏ.12 ರಂದು ಐದು ಅಭ್ಯರ್ಥಿಗಳಿಂದ 6 ನಾಮಪತ್ರಗಳು, ಏ.15 ರಂದು 8 ಅಭ್ಯರ್ಥಿಗಳಿಂದ 9 ನಾಮಪತ್ರಗಳು ಹಾಗೂ ಏ.16 ರಂದು 3 ಅಭ್ಯರ್ಥಿಗಳಿಂದ 3 ನಾಮಪತ್ರಗಳು, ಏ.17 ರಂದು 6 ಅಭ್ಯರ್ಥಿಗಳಿಂದ 6 ನಾಮಪತ್ರ, ಏ.18 ರಂದು 10 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ.