ದಾವಣಗೆರೆಗೆ 40 ಅಭ್ಯರ್ಥಿಗಳು, 54 ನಾಮಪತ್ರ

ನಾಮಪತ್ರ ಸಲ್ಲಿಕೆಯ ಕೊನೆ ದಿನದಂದು 20 ನಾಮಪತ್ರ ಸಲ್ಲಿಕೆ

10 ರೂ. ಮುಖಬೆಲೆಯ ನಾಣ್ಯಗಳಲ್ಲೇ ಠೇವಣಿ ಹಣ ಭರಿಸಿದ ಜನಹಿತ ಪಕ್ಷದ ದೊಡ್ಡೇಶಿ ಹೆಚ್.ಎಸ್

ಇಂದು ನಾಮಪತ್ರಗಳ ಪರಿಶೀಲನೆ 

ದಾವಣಗೆರೆ, ಏ.19- ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಶುಕ್ರವಾರ 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ. 

ಬಿಜೆಪಿಯಿಂದ ಜಿ.ಎಸ್.ಗಾಯತ್ರಿ 3 ನಾಮಪತ್ರ, ಜಿ.ಎಂ.ಸಿದ್ದೇಶ್ವರ ಬಿಜೆಪಿ 3 ನಾಮಪತ್ರ, ದೊಡ್ಡೇಶಿ ಹೆಚ್.ಎಸ್ ಜನಹಿತ ಪಕ್ಷ, ತಿಪ್ಪೇಸ್ವಾಮಿ ಕೆ.ಎ ಸೋಷಿಯಲ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದಿಂದ 2 ನಾಮಪತ್ರ, ಶ್ರೀನಿವಾಸ್ ಎಂ.ಸಿ. ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷ, ಕೆಆರ್‍ಎಸ್ ಪಕ್ಷದಿಂದ ಕೆ.ಎಸ್.ವೀರಭದ್ರಪ್ಪ ಉಳಿದಂತೆ ಎಲ್ಲಾ ಪಕ್ಷೇತರರಾಗಿದ್ದು ವಿನಯ್‍ಕುಮಾರ್ ಜಿ.ಬಿ ಎರಡು ನಾಮಪತ್ರ, ಪೆದ್ದಪ್ಪ ಎಸ್, ಇರ್ಫಾನುಲ್ಲಾ,  ಪ್ರಸನ್ನ ಬಿ.ಆರ್, ಮೆಹಬೂಬ ಪಾಷ, ಬರ್ಕತ್ ಅಲಿಭಾಷ, ಗಾಯತ್ರಿ ಜಿ.ಎಂ.ಕೋಂ ಸಿದ್ದೇಶಿ, ಕರಣಂ ಕೊಟ್ರಪ್ಪ ನಾಮಪತ್ರ ಸಲ್ಲಿಸಿದವರು. ಇದುವರೆಗೆ ಒಟ್ಟು 40 ಅಭ್ಯರ್ಥಿಗಳಿಂದ 54 ನಾಮಪತ್ರಗಳು ಸಲ್ಲಿಕೆಯಾಗಿವೆ.

  ಏ.12 ರಂದು ಐದು ಅಭ್ಯರ್ಥಿಗಳಿಂದ 6 ನಾಮಪತ್ರಗಳು, ಏ.15 ರಂದು 8 ಅಭ್ಯರ್ಥಿ ಗಳಿಂದ 9 ನಾಮಪತ್ರಗಳು ಹಾಗೂ ಏ.16 ರಂದು 3 ಅಭ್ಯರ್ಥಿಗಳಿಂದ 3 ನಾಮಪತ್ರಗಳು,
ಏ.17 ರಂದು 6 ಅಭ್ಯರ್ಥಿಗಳಿಂದ 6 ನಾಮಪತ್ರ, ಏ.18 ರಂದು 10 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಹಾಗೂ ಕೊನೆ ದಿನ ಏ.19 ರಂದು 14 ಅಭ್ಯರ್ಥಿಗಳಿಂದ 20 ನಾಮಪತ್ರಗಳು ಸಲ್ಲಿಕೆಯಾಗಿವೆ. 

ಕಾಂಗ್ರೆಸ್‍ನಿಂದ ಡಾ. ಪ್ರಭಾ ಮಲ್ಲಿಕಾರ್ಜುನ್ ನಾಲ್ಕು ನಾಮಪತ್ರ, ಬಿಜೆಪಿಯಿಂದ ಜಿ.ಎಸ್.ಗಾಯತ್ರಿ 4, ಬಿಜೆಪಿಯಿಂದ ಜಿ.ಎಂ.ಸಿದ್ದೇಶ್ವರ 3, ಕೆಆರ್‍ಎಸ್ ಪಕ್ಷದ ರಾಘವೇಂದ್ರ ಜಿ.ಪಿ 2, ಸೋಷಿಯಲ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದಿಂದ ತಿಪ್ಪೇಸ್ವಾಮಿ ಕೆ.ಎ 3 ನಾಮಪತ್ರ, ಪಕ್ಷೇತರರಾಗಿ ವಿನಯ್‍ಕುಮಾರ್ ಜಿ.ಬಿ. 4 ನಾಮಪತ್ರ ಸಲ್ಲಿಸಿದ್ದಾರೆ.  

error: Content is protected !!