ಕೃಷಿ ಪದವಿ ಕೋರ್ಸ್‌ ತರಬೇತಿ

ದಾವಣಗೆೆರೆ, ಏ. 21- ದ್ವಿತೀಯ ಪಿಯುಸಿ ಉತ್ತೀರ್ಣ ರಾದ ವಿದ್ಯಾರ್ಥಿಗಳಿಗೆ ಕೃಷಿ ಕೋಟಾದಡಿಯಲ್ಲಿ ಕೃಷಿಗೆ ಸಂಬಂ ಧಿಸಿದ ಪದವಿಗಳಿಗೆ ಪ್ರವೇಶ ಪಡೆಯಲು ಇರುವ ಪ್ರಾಯೋಗಿಕ ಪರೀಕ್ಷೆಗೆ ಹಾಗೂ ಕೃಷಿ ಪದವಿ ಕೋರ್ಸ್‌ಗಳ ಬಗ್ಗೆ ತರಬೇತಿ ಕಾರ್ಯಕ್ರಮವನ್ನು ನಾಳೆ ದಿನಾಂಕ 22 ರಿಂದ ನಗರದ ಐಸಿಆರ್-ತರ ಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ವಿಜ್ಞಾನಿ, ಕೇಂದ್ರದ ಮುಖ್ಯಸ್ಥ ಡಾ.ಟಿ.ಎನ್. ದೇವರಾಜ್ ತಿಳಿಸಿದ್ದಾರೆ.

ಕೃಷಿ ಪದವಿಗಳಿಗೆ ಪ್ರವೇಶ ಬಯಸುವ ಕೃಷಿಕರ ಮಕ್ಕಳಿಗೆ ಶೇ. 50 ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ನೀಡಿದ್ದು, ಇದರ ಸದುಪಯೋಗ ಪಡೆಯಬೇ ಕೆಂದು ಅವರು ಕೋರಿದ್ದಾರೆ.ಈಗಾಗಲೇ ತರಬೇತಿ ಪಡೆದ 284 ವಿದ್ಯಾರ್ಥಿಗಳು ರಾಜ್ಯದ ವಿವಿಧ ಕೃಷಿ, ತೋಟಗಾರಿಕೆ ಮತ್ತು ಪಶು ವಿಜ್ಞಾನ ಕಾಲೇಜು ಗಳಲ್ಲಿ ಪ್ರವೇಶ ಪಡೆದಿರುತ್ತಾರೆ. ವಿವರಕ್ಕೆ ಸಂಪರ್ಕಿಸಿ : 08192-263462, 297142.

error: Content is protected !!