ದಾವಣಗೆರೆ ಲೋಕಸಭಾ ಚುನಾವಣೆ, ಅಂತಿಮ ಕಣದಲ್ಲಿ 30 ಅಭ್ಯರ್ಥಿಗಳು

ದಾವಣಗೆರೆ, ಏ. 22 – ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಚುನಾವಣೆ ನಡೆಯುತ್ತಿದ್ದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಏಪ್ರಿಲ್ 22 ರಂದು 3 ಅಭ್ಯರ್ಥಿಗಳು ಉಮೇದುವಾರಿಕೆ ವಾಪಸ್ ಪಡೆಯುವ ಮೂಲಕ ಚುನಾವಣಾ ಕಣದಲ್ಲಿ 30 ಅಭ್ಯರ್ಥಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏ.19 ಕೊನೆಯ ದಿನವಾಗಿತ್ತು, ಒಟ್ಟು 40 ಅಭ್ಯರ್ಥಿಗಳಿಂದ 54 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಏ.20 ರಂದು ನಡೆದ ನಾಮಪತ್ರ ಪರಿಶೀಲನೆಯಲ್ಲಿ 7 ಅಭ್ಯರ್ಥಿಗಳ ನಾಮಪತ್ರ ತಿರಸ್ಕ್ರತವಾಗಿ 33 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದವಾಗಿದ್ದವು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. 

ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಇರ್ಫಾನ್ ಮುಲ್ಲಾ, ಬಿ. ಅಲ್ಲಾಭಕ್ಷಾ ಹಾಗೂ ಕೆ.ಜಿ. ಅಜ್ಜಪ್ಪ ಸೇರಿ 3 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ ಪಡೆಯುವ ಮೂಲಕ ಚುನಾವಣಾ ಅಂತಿಮ ಕಣದಲ್ಲಿ ಎಲ್ಲಾ ಪಕ್ಷ, ಪಕ್ಷೇತರರು ಸೇರಿದಂತೆ ಅಂತಿಮ ಕಣದಲ್ಲಿ 30 ಅಭ್ಯರ್ಥಿಗಳು ಉಳಿದಿದ್ದಾರೆ.

ಕಣದಲ್ಲಿರುವ ಅಭ್ಯರ್ಥಿಗಳ ವಿವರ; ಸೋಷಿಯಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಪಕ್ಷದ ಎ.ಕೆ. ತಿಪ್ಪೇಸ್ವಾಮಿ, ಭಾರತೀಯ ಕಾಂಗ್ರೆಸ್ ಪಕ್ಷದ ಡಾ. ಪ್ರಭಾ ಮಲ್ಲಿಕಾರ್ಜುನ್, ಉತ್ತಮ ಪ್ರಜಾಕೀಯ ಪಕ್ಷದ ಈಶ್ವರ, ಭಾರತೀಯ ಜನತಾ ಪಾರ್ಟಿ ಜಿ.ಎಸ್. ಗಾಯತ್ರಿ, ಬಿ.ಎಸ್.ಪಿ ಹನುಮಂತಪ್ಪ, ಸಮಾಜ ವಿಕಾಸ ಕ್ರಾಂತಿ ರುದ್ರೇಶ್ ಕೆ.ಹೆಚ್, ರಾಣಿ ಚೆನ್ನಮ್ಮ ಪಾರ್ಟಿ ಎಸ್. ವೀರೇಶ್, ಕಂಟ್ರಿ ಸಿಟಿಜನ್ ಪಾರ್ಟಿ ಎ.ಟಿ. ದಾದಾ ಖಲಂದರ್, ನವಭಾರತ ಸೇನಾ ಎಂ.ಜಿ. ಶ್ರೀಕಾಂತ್, ಹೆಚ್.ಎಸ್. ಜನಹಿತ ಪಕ್ಷದ ದೊಡ್ಡೇಶ್, ಭಾರತೀಯ ಪ್ರಜೆಗಳ ಕಲ್ಯಾಣ ಪಕ್ಷ ಎಂ.ಸಿ. ಶ್ರೀನಿವಾಸ, ಕೆ.ಆರ್.ಎಸ್.ನಿಂದ ಕೆ.ಎಸ್. ವೀರಭದ್ರಪ್ಪ.

ಪಕ್ಷೇತರರಾಗಿ ಜಿ.ಬಿ. ವಿನಯ್ ಕುಮಾರ್, ಟಿ. ಜಬೀನ್ ತಾಜ್, ಎ.ಕೆ. ಗಣೇಶ್, ಬರ್ಕತ್ ಅಲಿ, ಎಂ. ಮೊಹಮದ್ ಹಯಾತ್, ಎಂ.ಟಿ.ಚಂದ್ರಣ್ಣ, ಕೆ. ಸೈಯದ್ ಜಬೀವುಲ್ಲಾ, ಬಿ. ರವಿನಾಯ್ಕ್, ತಸ್ಲಿಮ್ ಬಾನು, ಹೆಚ್. ಪರ್ವೇಜ್, ರಶೀದ್ ಖಾನ್,  ಎಸ್. ಸಲೀಮ್, ಎ.ಕೆ. ಮಂಜುನಾಥ,  ಅಬ್ದುಲ್ ನಜೀರ್ ಅಹ್ಮದ್, ಎಸ್. ಪೆದ್ದಪ್ಪ, ಮೆಹಬೂಬ್ ಬಾಷಾ, ಜಿ.ಎಂ. ಬರ್ಕತ್ ಅಲಿ ಬಾಷಾ,  ಜಿ.ಎಂ. ಗಾಯತ್ರಿ, ಇವರು  ಅಂತಿಮ ಕಣದಲ್ಲಿರುವವರು.

error: Content is protected !!