ದಾವಣಗೆರೆ, ಏ. 24- ಬಿಜೆಪಿಯು ಹಿಂದೂ ರಾಷ್ಟ್ರದ ಹೆಸರಿನಲ್ಲಿ ಮನುವಾದಿ ಧರ್ಮ ಸ್ಥಾಪಿಸಲು ಹೊರಟಿರುವ ಹಿನ್ನೆಲೆಯಲ್ಲಿ ದಲಿತ ಸಂಘರ್ಷ ಸಮಿತಿ-ಕರ್ನಾಟಕದ ವತಿಯಿಂದ ಪ್ರತಿ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಆಂದೋಲನ ಹಮ್ಮಿಕೊಂಡಿರುವುದಾಗಿ ಸಂಘಟನೆಯ ಜಿಲ್ಲಾ ಸಂಚಾಲಕ ಅಜ್ಜಪ್ಪ ಎನ್. ತಿಳಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಸಂವಿಧಾನ ಉಳಿದಿದೆ. ಬಿಜೆಪಿ ಸಂವಿಧಾನ ನಾಶ ಮಾಡಲು ಹೊರಟಿದೆ. ಈ ಕುರಿತು ಜನ ಜಾಗೃತಿ ಅಗತ್ಯವಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಡಿ.ರಾಜಪ್ಪ, ಬಿ.ಅಣ್ಣಪ್ಪ, ಚನ್ನಗಿರಿ ಅಣ್ಣಪ್ಪ, ಆನಂದ್ ಸೋಮಶೇಖರ್, ಮಣಿಕಂಠ ಟಿ., ನಿಂಗರಾಜು ಇತರರಿದ್ದರು.