ನಗರದಲ್ಲಿ ಇಂದು ವಿಶ್ವಕರ್ಮ ಸಮಾಜದಿಂದ ಸಾಮೂಹಿಕ ಉಪನಯನ, ವಿವಾಹ ಮಹೋತ್ಸವ

ವಿಶ್ವಕರ್ಮ ಸಮಾಜ ಸಂಘ ಹಾಗೂ ಜಿಲ್ಲೆಯ ವಿಶ್ವಕರ್ಮ ಸಮಾಜದ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಸಾಮೂಹಿಕ ಉಪನಯನ ಹಾಗೂ ವಿವಾಹ ಮಹೋತ್ಸವ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಿ.ಎಂ. ಕೊಟ್ರೇಶಾಚಾರ್ ತಿಳಿಸಿದ್ದಾರೆ.

ಕಾಳಿಕಾದೇವಿ ರಸ್ತೆಯ ಶ್ರೀ ಕಾಳಿಕಾಂಬ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಸಮಾರಂಭ ನಡೆಯಲಿದೆ.  ಬೆಳಿಗ್ಗೆ 9.30 ರಿಂದ 10.30ರವರೆಗೆ ಯಜ್ಞೋಪವೀತ ಧಾರಣೆ ಹಾಗೂ ಬ್ರಹ್ಮೋಪದೇಶವಿದೆ. ಬೆಳಿಗ್ಗೆ 10.30ಕ್ಕೆ ಸಾಮೂಹಿಕ ವಿವಾಹಗಳು ಜರುಗಲಿವೆ. 

11 ಗಂಟೆಗೆ ಏರ್ಪಾಡಾಗಿರುವ ಸಭಾ ಕಾರ್ಯಕ್ರಮವನ್ನು ಜವಳಿ ವರ್ತಕ ಬಿ.ಸಿ. ಉಮಾಪತಿ ಉದ್ಘಾಟಿಸಲಿದ್ದಾರೆ. ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಬಸಾಪುರದ ಬಿ.ನಾಗೇಂದ್ರಾಚಾರ್ ಅಧ್ಯಕ್ಷತೆ ವಹಿಸಲಿದ್ದು, ಬಿ.ಎಲ್. ಸೀತಾರಾಮಾಚಾರ್, ಎನ್. ಪೂರ್ವಾಚಾರ್, ಬಿ.ಪಿ. ಜಗನ್ನಾಥ್, ಎಸ್.ರುದ್ರಾಚಾರ್ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

error: Content is protected !!