ನಾಳಿನ ಮೋದಿ ಸಮಾವೇಶಕ್ಕೆ ಅನುಮತಿ ನೀಡಬಾರದು : ಡಿ. ಬಸವರಾಜ್ ಆಗ್ರಹ

ದಾವಣಗೆರೆ, ಏ. 26 – ನಗರದಲ್ಲಿ ಏ.28ರಂದು ಹಮ್ಮಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಸಮಾವೇಶಕ್ಕೆ ಅನುಮತಿ ನೀಡ ಬಾರದು ಎಂದು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಡಿ. ಬಸವರಾಜ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಜಾತಿ, ಧರ್ಮ ಗಳ ನಡುವೆ ದ್ವೇಷ ಮೂಡಿಸುವ ಭಾಷಣ ಮಾಡುವುದರಿಂದ ಶಾಂತಿ ಹಾಗೂ ಸುವ್ಯವಸ್ಥೆಗೆ ದಕ್ಕೆ ಉಂಟಾಗಲಿದೆ. ಚುನಾ ವಣಾ ಪ್ರಚಾರಕ್ಕೆ ಅವಕಾಶ ನೀಡಬಾರದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಧಾನಿ ಮೋದಿಯವರ ಚುನಾವಣಾ ಪ್ರಚಾರ ಕಾರ್ಯಕ್ರಮಕ್ಕೆ ಅನುಮತಿ ನೀಡ ದಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾ ಗುವುದು. ಒಂದು ವೇಳೆ ಅವಕಾಶ ನೀಡಿದರೆ ಕಾಂಗ್ರೆಸ್‌ನಿಂದ ಕಪ್ಪು ಬಾವುಟ ಪ್ರದರ್ಶಿಸ ಲಾಗುವುದು ಎಂದು ಎಚ್ಚರಿಸಿದರು.

ಪಾಲಿಕೆ ಸದಸ್ಯ ಕೆ. ಚಮನ್‌ಸಾಬ್, ಮುಖಂಡರಾದ ಹುಲಿಕಟ್ಟೆ ಚಂದ್ರಪ್ಪ, ಕೆ.ಎಂ. ಮಂಜುನಾಥ್, ಮಹಮ್ಮದ್ ಸಮೀವುಲ್ಲಾ, ಬಿ. ವಿನಾಯಕ್, ಡಿ. ಶಿವಕುಮಾರ್ ಇತರರಿದ್ದರು.

error: Content is protected !!