ದಾವಣಗೆರೆ, ಏ. 29 – ಭಾರತ ಕಮ್ಯುನಿಸ್ಟ್ ಪಕ್ಷ ಮತ್ತು ಎಐಟಿಯುಸಿ ದಾವಣಗೆರೆ ಜಿಲ್ಲಾ ಮಂಡಳಿಗಳ ನೇತೃತ್ವದಲ್ಲಿ ಮೇ 1ರಂದು ವಿಶ್ವ ಕಾರ್ಮಿಕ ದಿನಾಚರಣೆ ಆಚರಿಸಲಾಗುವುದು ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಕಾಂ ಆವರಗೆರೆ ಚಂದ್ರು ತಿಳಿಸಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಪಿ. ಬಸವನಗೌಡ ರಸ್ತೆ (ನಿಟುವಳ್ಳಿ ರಸ್ತೆಯ) ಎಸ್ಎಸ್ಪಿ. ಕಾಂಪ್ಲೆಕ್ಸ್ ಬಳಿಯಿಂದ ಕಾರ್ಮಿಕರ ಮೆರವಣಿಗೆ ನಡೆಯಲಿದೆ.