ದಲಿತ ಸಂಘಟನೆಗಳ ಒಕ್ಕೂಟದಿಂದ ಕಾಂಗ್ರೆಸ್‌ಗೆ ಬೆಂಬಲ

ದಾವಣಗೆರೆ, ಏ.30- ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಡಾ.ಬಿ.ಆರ್. ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ನಿರ್ಧರಿಸಿದೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ, ಕಳೆದ ಹತ್ತು ವರ್ಷಗಳಿಂದ ದೇಶ ಅಧೋಗತಿಯತ್ತ ಸಾಗುತ್ತಿದೆ. ಕೋಮು ರಾಜಕೀಯ ವಿಜೃಂಭಿಸುತ್ತಿದೆ. ಹಸಿವು, ಅಸ್ಪೃಶ್ಯತೆ ಹೆಚ್ಚಾಗಿದೆ. ಜಾತ್ಯತೀತತೆ, ಪ್ರಗತಿಪರತೆ ಅಪಹಾಸ್ಯಕ್ಕೆ ಒಳಗಾಗಿದೆ ಎಂದರು. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಬಡವರಿಗೆ ಅನುಕೂಲವಾಗಿವೆ. ಸಂವಿಧಾನ ಉಳಿದರೆ ದೇಶ ಉಳಿಯಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ 28 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲು ನಿರ್ಧರಿಸಲಾಗಿದ್ದು, ಜಿಲ್ಲೆಯಲ್ಲೂ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸುವಂತೆ ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ  ಡಿ.ಎಸ್.ಎಸ್. ರಾಜ್ಯ ಸಂಚಾಲಕ ಗೋವಿಂದರಾಜು, ಭೀಮ್ ಆರ್ಮಿ ರಾಜ್ಯಾಧ್ಯಕ್ಷ ಡಿ.ಎಸ್. ರಾಜಗೋಪಾಲ್‌, ದಲಿತ ಸಂಘರ್ಷ ಸೇನೆ ರಾಜ್ಯಾಧ್ಯಕ್ಷ ಎ. ಗೋಪಾಲ, ವಿಜಯಮ್ಮ, ಕುಂದುವಾಡ ಮಂಜುನಾಥ್, ಚಿತ್ರಲಿಂಗಪ್ಪ, ಪ್ರದೀಪ್, ಮಂಜುನಾಥ್, ಮಹಾಂತೇಶ್, ಶಿವಶಂಕರ್ ಇತರರಿದ್ದರು.

error: Content is protected !!