ನಗರದಲ್ಲಿಂದು ಛಲವಾದಿ ಸಮಾಜದ ಸಭೆ

ದಾವಣಗೆರೆ, ಏ.30- ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಬೆಂಬಲಿಸುವ ಸಲುವಾಗಿ, ಮೇ 1ರಂದು ಬೆಳಗ್ಗೆ 11 ಗಂಟೆಗೆ ನಗರದಲ್ಲಿ ಛಲವಾದಿ ಸಮಾಜದ ಸಭೆ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಛಲವಾದಿ ಮಹಾಸಭಾ ಅಧ್ಯಕ್ಷ ಎನ್. ರುದ್ರಮುನಿ ತಿಳಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ನಿಜಲಿಂಗಪ್ಪ ಬಡಾವಣೆಯ ಛಲವಾದಿ ಸಮುದಾಯ ಭವನದಲ್ಲಿ ನಡೆಯುವ ಸಭೆಯಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮುಖಂಡ ಎಚ್.ಕೆ. ಬಸವರಾಜ್ ಮಾತನಾಡಿ, ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 60 ಸಾವಿರ ಮತದಾರರಿದ್ದು, ಶೇ.90ಕ್ಕೂ ಹೆಚ್ಚು ಮತದಾರರು ಕಾಂಗ್ರೆಸ್‌ಗೆ ಮತ ನೀಡುವ ಸಂಕಲ್ಪ ಮಾಡಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ಎಸ್. ಶೇಖರಪ್ಪ, ಟಿ.ಎಸ್. ರಾಮಯ್ಯ, ಡಾ.ಜಗನ್ನಾಥ್, ಎಚ್.ಚಂದ್ರಪ್ಪ, ಎಚ್.ನವೀನ್‌ಕುಮಾರ್, ಸಾರಥಿ ಬಸವರಾಜು, ಕೆ.ಗಿರೀಶ್, ಎ.ಡಿ. ಕೊಟ್ರಬಸಪ್ಪ, ರಾಘವೇಂದ್ರ ಕೊಂಡಜ್ಜಿ ಇದ್ದರು.

error: Content is protected !!