ದೇವರಾಜ ಅರಸು ಬಡಾವಣೆ ‘ಎ’ ಬ್ಲಾಕ್ ನಲ್ಲಿರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಕ್ಷಯ ತದಿಗೆ ಅಮಾವಾಸ್ಯೆ ಪ್ರಯುಕ್ತ ಇಂದು ಶ್ರೀ ನಾಗಲಿಂಗೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಮೃತ್ಯುಂಜಯ ಹೋಮ, ಪ್ರಧಾನ ದೇವತೆ ಶ್ರೀ ಮಾತಾ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. ಶ್ರೀ ವಿನಾಯಕ ಸೇವಾ ಸಮಿತಿಯವರು ಸೇವಾಕರ್ತ ರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.
ನಗರದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಅಮಾವಾಸ್ಯೆ ಪೂಜೆ
