ನಗರದ ಕಾಯಿಪೇಟೆಯಲ್ಲಿ ಇಂದಿನಿಂದ ಬಸವೇಶ್ವರ ಜಯಂತ್ಯೋತ್ಸವ

ಕಾಯಿಪೇಟೆಯ ಶ್ರೀ ಬಸವೇಶ್ವರ ನಗರದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಇಂದಿನಿಂದ ಮೂರು ದಿನ  ಶ್ರೀ ಬಸವೇಶ್ವರ ಜಯಂತ್ಯೋತ್ಸವ ನಡೆಯಲಿದೆ. ಇಂದು ಪ್ರಾತಃಕಾಲ ಶ್ರೀ ಬಸವೇಶ್ವರ ಪಾದಕ್ಕೆ ಮಹಾರುದ್ರಾಭಿಷೇಕ ಏರ್ಪಡಿಸಲಾಗಿದೆ. 

ನಾಳೆ ಶುಕ್ರವಾರ ಬೆಳಿಗ್ಗೆ 7 ರಿಂದ 9ರ ವರೆಗೆ ತೊಟ್ಟಿಲು ಪೂಜೆ, ಸಂಜೆ 5 ಗಂಟೆಗೆ  ವಿದ್ಯುತ್ ಅಲಂಕೃತ ವಾದ ಭವ್ಯವಾದ ಹೂವಿನ ಮಂಟಪದಲ್ಲಿ ಶ್ರೀ ಬಸವೇಶ್ವರ ಮೂರ್ತಿಯ ಮೆರವಣಿಗೆ ರಾಜಬೀದಿಗಳಲ್ಲಿ ಜರುಗಲಿದೆ.

ನಾಡಿದ್ದು ದಿನಾಂಕ 11ರ ಶನಿವಾರ ಸರ್ವ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.

error: Content is protected !!