ವಿಧಾನ ಪರಿಷತ್ ಚುನಾವಣೆ, ಮದ್ಯ ಮಾರಾಟ ನಿಷೇಧ

ದಾವಣಗೆರೆ, ಮೇ 19 – ಆಗ್ನೇಯ ಶಿಕ್ಷಕರ ಕ್ಷೇತ್ರ, ನೈರುತ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಕ್ತ, ಶಾಂತಿಯುತ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಬೇಕೆಂಬ ಉದ್ದೇಶದಿಂದ ಮತದಾನ ನಡೆಯುವ ದಿನಗಳಂದು ಜಿಲ್ಲೆಯಾದ್ಯಂತ ಶುಷ್ಕ ದಿವಸವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಆದೇಶಿಸಿದ್ದಾರೆ. ಜಿಲ್ಲಾದ್ಯಂತ ಜೂನ್ 1 ರ ಸಂಜೆ 4 ಗಂಟೆಯಿಂದ ಜೂನ್ 3 ರ ಸಂಜೆ 6 ಗಂಟೆಯವರೆಗೆ ಎಲ್ಲಾ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಡಾಬಾ, ಛತ್ರ ಇನ್ನಿತರೆ ಸ್ಥಳಗಳಲ್ಲಿ ಮದ್ಯ ಮಾರಾಟ ಮತ್ತು ಸರಬರಾಜು ಹಾಗೂ ಮದ್ಯಪಾನವನ್ನು ನಿಷೇಧಿಸಲಾಗಿರುತ್ತದೆ.

error: Content is protected !!