ಮೊಳಕಾಲ್ಮೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಮೊಬೈಲ್ ಬೆಳಕೇ ಗತಿ

ಮೊಳಕಾಲ್ಮೂರು, ಮೇ 21 – ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ಸಮಸ್ಯೆಯಾಗಿ ವೈದ್ಯರು ಮೊಬೈಲ್ ಬೆಳಕಿನಲ್ಲೇ ಚಿಕಿತ್ಸೆ ನೀಡಿದ ಘಟನೆ ನಡೆದಿದೆ.

ಮಳೆ ಕಾರಣದಿಂದ ತಾಲ್ಲೂಕಿನಲ್ಲಿ ವಿದ್ಯುತ್ ಸಮಸ್ಯೆಯಾಗಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯವಾಗುವ ಜೊತೆಗೆ, ಜನರೇಟರ್ ಸಹ ಕೆಟ್ಟಿತ್ತು. ಹೀಗಾಗಿ ವೈದ್ಯರು ಚಿಕಿತ್ಸೆಗಾಗಿ ಮೇಣದ ಬತ್ತಿ ಹಾಗೂ ಮೊಬೈಲ್ ಬೆಳಕಿನ ಮೊರೆ ಹೋಗಿದ್ದಾರೆ. ಜನರೇಟರ್ ಕೆಟ್ಟು ವಾರವಾದರೂ ರಿಪೇರಿಯಾಗಿಲ್ಲ ಎಂದು ದೂರಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಬಿಜೆಪಿ, ಇದು ಕಾಂಗ್ರೆಸ್ ಸರ್ಕಾರದ ವರ್ಷದ ಸಂಭ್ರಮಾಚರಣೆಯ ಗ್ಯಾರಂಟಿ ಕತ್ತಲು ಭಾಗ್ಯ ಎಂದು ಲೇವಡಿ ಮಾಡಿದೆ.

error: Content is protected !!