ನಗರದಲ್ಲಿ ಇಂದು ಇಂಡೋ -ಶ್ರೀಲಂಕಾ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

ನಮನ ಅಕಾಡೆಮಿ (ದಾವಣಗೆರೆ), ಭಾರತ ಬೆಸಿಲಿಕ ಸ್ಪೋರ್ಟ್ಸ್ ಅಂಡ್ ಲೀಶರ್, ಶ್ರೀಲಂಕಾ ಜಂಟಿಯಾಗಿ ಇಂಡೋ-ಶ್ರೀಲಂಕಾ ಸಾಂಸ್ಕೃ ತಿಕ ವಿನಿಮಯ ಕಾರ್ಯಕ್ರಮವು ಇಂದು ಸಂಜೆ 6 ಗಂಟೆಗೆ  ಬಿಐಇಟಿ ಕ್ಯಾಂಪಸ್‌ನಲ್ಲಿರುವ ಎಸ್.ಎಸ್. ಮಲ್ಲಿಕಾರ್ಜುನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಶಾಮನೂರು ಶಿವಶಂಕರಪ್ಪ, ಡಾ. ಎಂ.ಜಿ. ಈಶ್ವರಪ್ಪ, ರೋಶನ್ ಸಿಲ್ವಾ ಉಪಸ್ಥಿತರಿರುವರು. ಗೌರವ ಅತಿಥಿಗಳಾಗಿ  ಹೆಚ್.ಬಿ. ಮಂಜುನಾಥ್ ಆಗಮಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎನ್. ಗೋಪಾಲಕೃಷ್ಣ ವಹಿಸುವರು.

error: Content is protected !!