ಜೂ.1 ರಿಂದ ಶಾಂತಿಸಾಗರದಲ್ಲಿ ಮೀನು ಹಿಡುವಳಿ ನಿಷೇಧ

ದಾವಣಗೆರೆ, ಮೇ 27- ಮುಂಗಾರು ಮಳೆಗಾಲದ ಅವಧಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಚನ್ನಗಿರಿ ತಾಲ್ಲೂಕು ಶಾಂತಿಸಾಗರ ಜಲಾಶಯದಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮಳೆಗಾಲದ ಅವಧಿಯಲ್ಲಿ ಮೀನುಗಳು ವಂಶಾಭಿವೃದ್ಧಿ ಚಟುವಟಿಕೆ ನಡೆಸುವುದರಿಂದ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಷೇಧ ಉಲ್ಲಂಘಿಸಿ, ಮೀನು ಹಿಡುವಳಿ ಮಾಡಿದ್ದಲ್ಲಿ ನಿಯಮಾನುಸಾರ ಕಾನೂನು ಜರುಗಿಸ ಲಾಗುವುದೆಂದು ಶಾಂತಿಸಾಗರದ ಮೀನು ಮರಿಪಾಲನಾ ಕೇಂದ್ರದ ಮೀನುಗಾರಿಕೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!