ಜೂ. 4ರಂದು ಜಿಲ್ಲಾದ್ಯಂತ ನಿಷೇಧಾಜ್ಞೆ

 ದಾವಣಗೆರೆ, ಮೇ 29 – ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಜೂನ್ 4 ರಂದು ಬೆಳಿಗ್ಗೆ 6 ರಿಂದ ಜೂನ್ 5ರ ಬೆಳಿಗ್ಗೆ 6 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಆದೇಶಿಸಿದ್ದಾರೆ.

ಮತ ಎಣಿಕೆ ಕಾರ್ಯವು ದಾವಣಗೆರೆ ವಿಶ್ವವಿದ್ಯಾಲಯದ ಕಟ್ಟಡದಲ್ಲಿ   ನಡೆಯಲಿದೆ. ಗೆದ್ದಂತಹ ರಾಜಕೀಯ ಅಭ್ಯರ್ಥಿಗಳ   ಕಾರ್ಯಕರ್ತರು ಗುಂಪು ಸೇರಿ ಪಟಾಕಿ ಹೊಡೆಯುವುದು, ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡುವುದು ನಿಷಿದ್ಧ ಎಂದು ಅವರು ತಿಳಿಸಿದ್ದಾರೆ.

error: Content is protected !!