ಜೂನ್ ಮಾಹೆಯಲ್ಲಿ ರಂಭಾಪುರಿ ಜಗದ್ಗುರುಗಳ ಪ್ರವಾಸ

ಜೂನ್ ಮಾಹೆಯಲ್ಲಿ ರಂಭಾಪುರಿ ಜಗದ್ಗುರುಗಳ ಪ್ರವಾಸ

ಬಾಳೆಹೊನ್ನೂರು, ಮೇ 29 – ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಜೂನ್ ಮಾಹೆಯ ಪ್ರವಾಸ ಕಾರ್ಯಕ್ರಮದ ವಿವರ.

ದಿನಾಂಕ 7 ರಂದು ಹಾಸನ ಜಿಲ್ಲೆ ಆಲೂರಿನಲ್ಲಿ ಪುರ ಪ್ರವೇಶ-ಧರ್ಮ ಸಮಾರಂಭ, 9 ರಂದು ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕು ಸಿದ್ಧರ ಬೆಟ್ಟ ಕ್ಷೇತ್ರದಲ್ಲಿ ಶ್ರೀ ವೀರಭದ್ರ ಶಿವಾಚಾರ್ಯರ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ, 12 ರಂದು ಚಿಕ್ಕಮಗಳೂರಿನಲ್ಲಿ ಶ್ರೀ ಜಗದ್ಗುರು ರೇಣುಕ-ಶ್ರೀ ಬಸವ ಜಯಂತಿ ಸಮಾರಂಭ, 13 ರಂದು ಅಜ್ಜಂಪುರ ತಾಲ್ಲೂಕು ಹಣ್ಣೆ ಮಠದಲ್ಲಿ ಲಿಂ. ಶಿವಾನಂದ ಶ್ರೀಗಳ ಪುಣ್ಯ ಸ್ಮರಣೆ ಹಾಗೂ ಮರುಳಸಿದ್ಧ ಪಂಡಿತಾರಾಧ್ಯರ 5ನೇ ವರ್ಧಂತಿ ಧರ್ಮ ಸಮಾರಂಭ, 14 ರಂದು ಶಿವಮೊಗ್ಗದಲ್ಲಿ ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸುವರು. 

ದಿನಾಂಕ 16 ರಂದು ದಾವಣಗೆರೆ ಯಲ್ಲಿ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಸಮಾರಂಭ, 17 ರಂದು ಬೆಂಗಳೂರಿನಲ್ಲಿ ಇಷ್ಟಲಿಂಗ ಮಹಾಪೂಜೆ, 18 ರಂದು ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಧರ್ಮ ಸಮಾರಂಭ, ದಿನಾಂಕ 19 ರಂದು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕು ತಾವರಗೆರೆಯಲ್ಲಿ ವೀರೇಶ ಪಾಟೀಲರ ವೈವಾಹಿಕ ಜೀವನದ ರಜತ ಮಹೋತ್ಸವದಲ್ಲಿ ಪಾಲ್ಗೊಳ್ಳುವರು. 

21 ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠದಲ್ಲಿ ಪೌರ್ಣಿಮೆಯ ನಿಮಿತ್ಯ ವಾಸ್ತವ್ಯವಿದ್ದು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು. 

ದಿನಾಂಕ 27 ರಿಂದ 29ರ ವರೆಗೆ ಕಲಬುರ್ಗಿ ಜಿಲ್ಲೆ ಚಿಂಚೋಳಿಯಲ್ಲಿ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮ ಜಾಗೃತಿ ಸಮಾರಂಭ, 30 ರಂದು ಕಲಬುರ್ಗಿಯಲ್ಲಿ ಡಾ. ಸಿದ್ಧಲಿಂಗಯ್ಯ ಹನಗೋಡಿಮಠ ಅವರ ಷಷ್ಟ್ಯಬ್ಧಿ ಸಮಾರಂಭದ ಸಾನ್ನಿಧ್ಯ ವಹಿಸುವರು. ಶ್ರೀ ರಂಭಾಪುರಿ ಜಗದ್ಗುರುಗಳವರ ಧಾರ್ಮಿಕ ಕಾರ್ಯಕ್ರಮಗಳ ಲಾಭವನ್ನು ಸಮಸ್ತರು ಪಡೆದು ಕೊಳ್ಳುವಂತೆ ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ತಿಳಿಸಿದ್ದಾರೆ.

error: Content is protected !!