ಮೂರು ಜನ ಕಿಶೋರ ಕಾರ್ಮಿಕರ ಪತ್ತೆ

ದಾವಣಗೆರೆ, ಜೂ.2- ಜೂನ್ 1 ರ ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ನಗರದಲ್ಲಿ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ  ಅಧಿಕಾರಿಗಳ ತಂಡ ನಿನ್ನೆ ಭೇಟಿ ನೀಡಿತ್ತು.

ತಪಾಸಣೆಯಲ್ಲಿ ಮೂವರು ಕಿಶೋರ ಕಾರ್ಮಿಕರು ಅಪಾಯಕಾರಿ ಉದ್ದಿಮೆಯಲ್ಲಿ ಪತ್ತೆಯಾಗಿದ್ದು, ಪತ್ತೆಯಾದ ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿ ಮಾಲೀಕರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಮಾಲೀಕರಿಗೆ ಕರಪತ್ರ ಮತ್ತು ಸ್ಟೀಕ್ಕರ್ಸ್ ನೀಡಿ ಜಾಗೃತಿ ಮೂಡಿಸಿದರು.

ಕಾರ್ಮಿಕ ನಿರೀಕ್ಷಕರಾದ ರಾಜಶೇಖರ್ ಹಿರೇಮಠ್, ಟಿ.ರಾಜಪ್ಪ, ಆರ್.ನಾಗೇಶ್ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಮಮತಾ ಮತ್ತು ವೀರೇಶ್, ಶಿಶು ಸಹಾಯಕ ಅಭಿವೃದ್ದಿ ಅಧಿಕಾರಿ ಪ್ರಿಯದರ್ಶಿನಿ, ಯೋಜನಾ ನಿರ್ದೇಶಕ ಇ.ಎನ್.ಪ್ರಸನ್ನ ಹಾಜರಿದ್ದರು.

error: Content is protected !!