ಛಲವಾದಿ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ದಾವಣಗೆರೆ, ಜೂ. 13 – ಜಿಲ್ಲಾ ಛಲವಾದಿ ಮಹಾಸಭಾ ವತಿಯಿಂದ 2023-24ನೇ ಸಾಲಿನಲ್ಲಿ ತೇರ್ಗಡೆಯಾದ ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರವನ್ನು ಏರ್ಪಡಿಸಲಾಗಿದೆ. ಎಸ್ಸೆಸ್ಸೆಲ್ಸಿಯಲ್ಲಿ ಶೇ. 75 ಹಾಗೂ ಪಿಯುಸಿಯಲ್ಲಿ 80 ಕ್ಕಿಂತ ಹೆಚ್ಚು ಅಂಕಗಳಿಸಿದ ಛಲವಾದಿ ಸಮಾಜದ ವಿದ್ಯಾರ್ಥಿಗಳು ಅರ್ಜಿಯನ್ನು ಇದೇ ದಿನಾಂಕ 17ರೊಳಗೆ ಸಲ್ಲಿಸಬಹುದಾಗಿದೆ. ಮಹಾ ಸಭಾದ ಅಧ್ಯಕ್ಷ ಎನ್. ರುದ್ರಮುನಿ (94495 25493), ಕಾರ್ಯಾಧ್ಯಕ್ಷ ಟಿ.ಎಸ್. ರಾಮಯ್ಯ  (91085 96368) ಸಂಪರ್ಕಿಸಬಹುದಾಗಿದೆ.

error: Content is protected !!