`ಕರ್ನಾಟಕ ಸಂಭ್ರಮ-50’ರ ಅಂಗವಾಗಿ ಕರ್ನಾಟಕ ಜ್ಯೋತಿ ರಥಯಾತ್ರೆಯು ರಾಜ್ಯಾದ್ಯಂತ ಸಂಚರಿಸುತ್ತಿದ್ದು, ಇಂದು ಬೆಳಿಗ್ಗೆ 9 ಗಂಟೆಗೆ ರಾಣೇಬೆನ್ನೂರು ತಾಲ್ಲೂಕಿನಿಂದ ಹರಿಹರಕ್ಕೆ ಆಗಮಿಸಲಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಜಗಳೂರಿಗೆ ತೆರಳಲಿದೆ.
ನಾಳೆ ಶನಿವಾರ ಬೆಳಿಗ್ಗೆ 9 ಗಂಟೆಗೆ ಜಗಳೂರಿನಿಂದ ದಾವಣಗೆರೆಗೆ ಆಗಮಿಸಲಿದೆ. ದಿನಾಂಕ 7 ರಂದು ಬೆಳಿಗ್ಗೆ 9 ಗಂಟೆಗೆ ದಾವಣಗೆರೆಯಿಂದ ಹೊನ್ನಾಳಿ, ದಿನಾಂಕ 8 ರಂದು ಬೆಳಿಗ್ಗೆ 9 ಗಂಟೆಗೆ ಹೊನ್ನಾಳಿಯಿಂದ ಚನ್ನಗಿರಿಗೆ ತೆರಳಲಿದೆ.
ರಥಯಾತ್ರೆ ಜಿಲ್ಲೆಗೆ ಆಗಮಿಸುವ ಸಂದರ್ಭದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಸ್ವಾಗತಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.