ಕರ್ನಾಟಕ ಸಂಭ್ರಮ – 50ರ ಅಂಗವಾಗಿ ಕರ್ನಾಟಕ ಜ್ಯೋತಿ ರಥ ಯಾತ್ರೆಯು ರಾಜ್ಯದಾದ್ಯಂತ ಸಂಚರಿಸುತ್ತಿದ್ದು, ಇಂದು ಬೆಳಿಗ್ಗೆ 9ಕ್ಕೆ ಜಗಳೂರಿನಿಂದ ನಗರಕ್ಕೆ ಆಗಮಿಸಲಿದೆ. ಬೆಳಿಗ್ಗೆ 10ಕ್ಕೆ ಗಾಂಧಿ ವೃತ್ತದ ಬಳಿ ಕರ್ನಾಟಕ ಜ್ಯೋತಿ ರಥಯಾತ್ರೆಯನ್ನು ಅಭಿಮಾನಪೂರ್ವಕವಾಗಿ ಬರಮಾಡಿಕೊಳ್ಳಲಾಗುವುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದ್ದಾರೆ.
February 27, 2025