ಹರಿಹರ ತಾಲ್ಲೂಕು ಹನಗವಾಡಿ ಸಮೀಪದ ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್ ಮೈತ್ರಿವನದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಹಾಗೂ ಮಾನವ ಬಂಧುತ್ವ ಮಹಿಳಾ ವೇದಿಕೆ ಸಂಯುಕ್ತಾಶ್ರಯದಲ್ಲಿ ಇಂದು ಮತ್ತು ನಾಳೆ ಮಹಿಳಾ ಬಂಧುತ್ವ ವೇದಿಕೆಯ ಎಲ್ಲಾ ಜಿಲ್ಲಾ ಸಂಚಾಲಕರು ಮತ್ತು ಸಹ ಸಂಚಾಲಕರಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಹಿರಿಯ ಪತ್ರಕರ್ತ ದಿನೇಶ್ ಅಮ್ಮಿನಮಟ್ಟು `ಪ್ರಜಾಪ್ರಭುತ್ವದಲ್ಲಿ ಮಹಿಳಾ ಮೀಸಲಾತಿ ಮತ್ತು ಸವಾಲುಗಳು’ ಕುರಿತು ಮಾತನಾಡಲಿದ್ದಾರೆ.
`ಲಿಂಗ ಸಮಾನತೆ ಮತ್ತು ಮಹಿಳಾ ಚಳವಳಿಗಳ ಮಹತ್ವ’, `ಸ್ವಸಹಾಯ ಗುಂಪುಗಳ ಪರಿಕಲ್ಪನೆ ಮತ್ತು ಪ್ರಸ್ತುತ ಸ್ಥಿತಿಗತಿ’ ಕುರಿತು ವಿವಿಧ ವಿದ್ವಾಂಸರು ವಿಚಾರ ಮಂಡನೆ ಮಾಡಲಿದ್ದಾರೆ.
ಕಾರ್ಯಾಗಾರದಲ್ಲಿ ಇಂದಿರಾ ಬಿ.ಕೃಷ್ಣಪ್ಪ, ಡಾ. ನೀಲಾ ಸಂಪಿಗೆ, ರುದ್ರಪ್ಪ ಹನಗವಾಡಿ, ಡಾ.ಎ.ಬಿ. ರಾಮಚಂದ್ರಪ್ಪ, ರವಿನಾಯ್ಕರ್ ಮುಂತಾದವರು ಭಾಗವಹಿಸಲಿದ್ದಾರೆ.