ಪ್ರೊ. ಕೃಷ್ಣಪ್ಪ ಭವನದಲ್ಲಿ ಇಂದು - ನಾಳೆ ಬಂಜಾರ ಸಮಾಜದ ರಾಜ್ಯಮಟ್ಟದ ಉದ್ಯಮಶೀಲತಾ ತರಬೇತಿ ಕಾರ್ಯಗಾರ

ಬಂಜಾರ ಸಮಾಜದಿಂದ ಮಾನವ ಬಂಧುತ್ವ ವೇದಿಕೆ ಸಹಯೋಗದಲ್ಲಿ ಬಂಜಾರ ಯುವ ಜನರಿಗಾಗಿ ರಾಜ್ಯ ಮಟ್ಟದ ಉದ್ಯಮಶೀಲತೆ ಮತ್ತು ನಾಯಕತ್ವ ತರಬೇತಿ ಕಾರ್ಯಾಗಾರವನ್ನು ಹರಿಹರ ತಾಲ್ಲೂಕಿನ ಹನಗವಾಡಿ ಸಮೀಪದ ಪ್ರೊ. ಬಿ. ಕೃಷ್ಣಪ್ಪ ಭವನದಲ್ಲಿ ಇಂದು – ನಾಳೆ ಆಯೋಜಿಸಲಾಗಿದೆ.

ಇಂದು ಬೆಳಿಗ್ಗೆ 10.30ಕ್ಕೆ ಕಾರ್ಯಾಗಾರವನ್ನು ಐಜಿಪಿ ರಮೇಶ್ ಬಾನಾವತ್ ಉದ್ಘಾಟಿಸಲಿದ್ದಾರೆ. 

ಎಂಬಿವಿ ರಾಜ್ಯ ಸಂಚಾಲಕ ಪ್ರೊ ಎ.ಬಿ. ರಾಮಚಂದ್ರಪ್ಪ ದಿಕ್ಕೂಚಿ ಭಾಷಣ ಮಾಡಲಿದ್ದು, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಜಯದೇವನಾಯ್ಕ, ಕೌಶಲ್ಯಾಭಿವೃದ್ಧಿ ನಿಗಮ ಅಧ್ಯಕ್ಷ ಕಾಂತನಾಯ್ಕ, ಕರ್ನಾಟಕ ಬಂಜಾರ ನೌಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಹರೀಶ್‌ನಾಯ್ಕ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಡಾ. ಆರ್. ಸೀನಾ ನಾಯಕ್, ಎ.ಐ.ಬಿ.ಎಸ್.ಎಸ್ ಮಹಿಳಾ ರಾಜ್ಯಾಧ್ಯಕ್ಷ ಶೈಲಜಾಬಾಯಿ ಉಪಸ್ಥಿತರಿರುವರು.

ನಂತರ ಗೋಷ್ಠಿಗಳು ನಡೆಯಲಿದ್ದು, ಸಂಜೆ 6.30 ರಿಂದ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬಂಜಾರ ಅಕಾಡೆಮಿ ಅಧ್ಯಕ್ಷ ಡಾ. ಗೋವಿಂದಸ್ವಾಮಿ ಚಾಲನೆ ನೀಡಲಿದ್ದಾರೆ.

ನಾಳೆ ದಿನಾಂಕ 28 ರ ಭಾನುವಾರ ಬೆಳಿಗ್ಗೆ 8 ಗಂಟೆಗೆ ವ್ಯಾಯಾಮ, ಪುನರ್‌ ಮನನ ಇರಲಿದೆ. ನಂತರ ಬೆಳಿಗ್ಗೆ 10 ಗಂಟೆಯಿಂದ ಗೋಷ್ಠಿಗಳು ನಡೆಯಲಿವೆ. ಸಂಜೆ 6 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ  ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಮಾಜಿ ನಿರ್ದೇಶಕ ಅನಿಲ್‌ಕುಮಾರ್ ಸಮಾರೋಪ ನುಡಿಗಳನ್ನಾಡುವರು.

error: Content is protected !!