ರೈತ ಒಕ್ಕೂಟದಿಂದ ಭದ್ರೆಗೆ ಬಾಗಿನ 1ಕ್ಕೆ

ದಾವಣಗೆರೆ, ಜು. 29 – ಜಿಲ್ಲಾ ರೈತ ಒಕ್ಕೂಟದಿಂದ ಆಗಸ್ಟ್ 1ರಂದು ಭದ್ರಾ ಜಲಾಶಯದಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ತಿಳಿಸಿದ್ದಾರೆ.

ಮಾಜಿ ಸಚಿವರುಗಳಾದ ಎಸ್.ಎ. ರವೀಂದ್ರನಾಥ್, ಎಂ.ಪಿ.ರೇಣುಕಾ ಚಾರ್ಯ, ಮಾಜಿ ಶಾಸಕರುಗಳಾದ ಮಾಡಾಳ್ ವಿರೂಪಾಕ್ಷಪ್ಪ, ಎಂ. ಬಸವರಾಜ ನಾಯ್ಕ, ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿ ಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್. ರಾಜಶೇಖರ್, ರೈತ ಯುವ ಮುಖಂಡ ಮಾಡಾಳ್  ಮಲ್ಲಿಕಾರ್ಜುನ್, ರೈತ ಒಕ್ಕೂಟದ ಅಧ್ಯಕ್ಷ ಶಾಮನೂರು ಹೆಚ್.ಆರ್. ಲಿಂಗರಾಜ್‌, ಕೊಂಡಜ್ಜಿ ಶ್ಯಾನಭೋಗ್‌ ನಾಗರಾಜ್, ಮಾಜಿ ಮೇಯರ್ ಬಿ.ಜಿ. ಅಜಯ್‌ಕುಮಾರ್, ರೈತ ಜಿಲ್ಲಾ ವಕ್ತಾರರಾದ ಕೊಳೇನಹಳ್ಳಿ ಬಿ.ಎಂ. ಸತೀಶ್, ಚಂದ್ರಶೇಖರ್ ಪೂಜಾರ್, ಬಿಜೆಪಿ ಮುಖಂಡರಾದ ಎಲ್.ಎನ್. ಕಲ್ಲೇಶ್, ಸೊಮೇಶ್ವರ ಸುರೇಶ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಕಡ್ಲೇಬಾಳ್, ಅನಿಲ್‌ಕುಮಾರ್ ನಾಯ್ಕ್, ಅಣ್ಣೇಶ್ ಐರಣಿ ಹಾಗೂ ಜಿಲ್ಲೆಯ ರೈತ ಮುಖಂಡರುಗಳು ಭಾಗವಹಿಸಲಿದ್ದಾರೆ.

error: Content is protected !!