ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ: ಓರ್ವ ವಶಕ್ಕೆ

ದಾವಣಗೆರೆ, ಆ.25- ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಬಡಾವಣೆ ಠಾಣೆ ಪೊಲೀಸರು ಶನಿವಾರ ಓರ್ವನನ್ನು ಬಂಧಿಸಿದ್ದಾರೆ.

ದಾವಣಗೆರೆಯ ರವಿಕುಮಾರ್‌ ಬಂಧಿತ ಆರೋಪಿಯಾಗಿದ್ದು, ಈತನನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿ, ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಡಾ. ಸನ್ನಿಧಿ ನಾಯ್ಕ, ಡಾ. ಡಿ.ಎಸ್‌.ನಿಶಾಂತ್‌ ಹಾಗೂ ಡಾ.ಅಂಕುಶ್‌ ಅವರು ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿ ದ್ದಾರೆ. ಶುಕ್ರವಾರ ರಾತ್ರಿ ಪಾಳಿಯಲ್ಲಿ ಬಾಪೂಜಿ ಮಕ್ಕಳ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹಲ್ಲೆ ನಡೆದಿದೆ.

ಆರೋಪಿ ರವಿಕುಮಾರ್‌ ಅನಾರೋಗ್ಯದಿಂದ ಬಳಲು ತ್ತಿದ್ದ ಪುತ್ರಿ ತಾನ್ವಿ (4) ಹಾಗೂ ಪತ್ನಿ ಉಷಾ ಅವರೊಂದಿಗೆ ಶುಕ್ರವಾರ ಮಧ್ಯರಾತ್ರಿ ಆಸ್ಪತ್ರೆಗೆ ಬಂದಿದ್ದರು. ಬಾಲಕಿಯ ಆರೋಗ್ಯ ಪರೀಕ್ಷಿಸಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿತ್ತು. ಕೆಲ ಸಮಯದ ಬಳಿಕ ಬಾಲಕಿಯ ಆರೋಗ್ಯದಲ್ಲಿ ತೀವ್ರ ಏರುಪೇರು ಕಾಣಿಸಿಕೊಂಡಿತ್ತು. ಚಿಕಿತ್ಸೆ ನೀಡುತ್ತಿರುವಾಗ ಐಸಿಯುಗೆ ನುಗ್ಗಿದ ರವಿಕುಮಾರ್‌, ವೈದ್ಯರ ಮೇಲೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಠಾಣೆಗೆ ನೀಡಿದ ದೂರಿನಲ್ಲಿ ವೈದ್ಯರು ತಿಳಿಸಿದ್ದಾರೆ.

error: Content is protected !!