ಹರಿಹರ, ಅ, 27-ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿ ದಾವಣಗೆರೆ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ನಗರದ ಹೊರ ವಲಯದ ಶ್ರೀ ಹರಿಹರೇಶ್ವರ ಲೇಔಟ್ ತರಳಬಾಳು ಪ್ರೌಢಶಾಲಾ ಮುಂಭಾಗದಲ್ಲಿನ ಹಂಪ್ಸ್ ಬಳಿ ಬಸ್ ನಿಧಾನವಾಗಿ ಚಲಿಸುತ್ತಿದ್ದು, ಹಿಂದಿನಿಂದ ಬಂದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದರಿಂದ ನಿರಂಜನ ಮತ್ತು ವಿನಯ್ ಎಂಬ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿವೆ.
ಯುವಕರು ಕೋಡಿಯಾಲ ಹೊಸಪೇಟೆ ಗ್ರಾಮದವರು ಎನ್ನಲಾಗಿದ್ದು, ಸ್ಥಳಕ್ಕೆ ಎಎಸ್ಐ ರಾಜಶೇಖರಯ್ಯ, ಸಿಬ್ಬಂದಿ ತಿಪ್ಪೇಸ್ವಾಮಿ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು.